ತಿಂಗಳಲ್ಲಿ 900 ಶ್ವಾನಗಳ ಕಗ್ಗೊಲೆ
ಕಳೆದ ಡಿಸೆಂಬರ್ನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಅಧಿಕಾರಕ್ಕೆ ಬಂದರೆ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಭರವಸೆ ನೀಡಲಾಗಿತ್ತು. ಅದನ್ನು ನೆರವೇರಿಸಲು ಸರಪಂಚ, ಜನಪ್ರತಿನಿಧಿಗಳು ಸೇರಿ ಈ ಕೃತ್ಯ ನಡೆಸಿರುವ ಶಂಕೆಯಿದೆ. ಈ ಸಂಬಂಧ ಇಬ್ಬರ ವಿರುದ್ಧ ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತನಿಖೆ ವೇಳೆ ಪೊಲೀಸರು 70-80 ಶ್ವಾನಗಳ ಮೃತದೇಹಗಳನ್ನು ಸಮಾಧಿಯಿಂದ ಹೊರತೆಗೆದಿದ್ದಾರೆ.
ಮೊದಲು ಹನಮಕೊಂಡ ಜಿಲ್ಲೆಯಲ್ಲಿ 300, ಕಾಮರೆಡ್ಡಿಯಲ್ಲಿ 200, ಯಾಚಾರಂ ಗ್ರಾಮದಲ್ಲಿ 100 ನಾಯಿಗಳನ್ನು ವಿಷವಿಕ್ಕಿ ಕೊಲ್ಲಲಾಗಿತ್ತು.==
ಸಿಬಿಎಸ್ಇ ಶಾಲೆಗಳಲ್ಲಿ ಆಪ್ತಸಮಾಲೋಚಕರ ನಿಯೋಜನೆಯನ್ನು ಕಡ್ಡಾಯಗೊಳಿಸುವಂತೆ ಕೋರಿ ಕೋಟಾದ ಕೆಲವರು ರಾಜಸ್ಥಾನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಸಿಬಿಎಸ್ಇ ಕಾನೂನಿಗೆ ತಿದ್ದುಪಡಿ ತಂದಿದೆ. ಇದರನ್ವಯ ಸಿಬಿಎಸ್ಇ ಶಾಲೆಗಳು ಪ್ರತಿ 500 ವಿದ್ಯಾರ್ಥಿಗೆ ಒಬ್ಬ ಪೂರ್ಣಾವಧಿ ಸಮಾಲೋಚಕ, ಸ್ವಾಸ್ಥ್ಯ ಶಿಕ್ಷಕ ಅಥವಾ ಸಾಮಾಜಿಕ-ಭಾವನಾತ್ಮಕ ಸಲಹೆಗಾರ ಹಾಗೂ ವೃತ್ತಿ ಸಲಹೆಗಾರರನ್ನು ನೇಮಿಸುವುದು ಕಡ್ಡಾಯವಾಗಿದೆ.ಈ ಹಿಂದೆ, 9ರಿಂದ 12ನೇ ತರಗತಿಗಳವರೆಗಿನ 300ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಮಾತ್ರ ಪೂರ್ಣ ಸಮಯದ ಆಪ್ತ ಸಮಾಲೋಚಕರ ನೇಮಕಕ್ಕೆ ಅವಕಾಶವಿತ್ತು. ಆದರೆ ಸಣ್ಣ ಶಾಲೆಗಳಿಗೆ ಅರೆಕಾಲಿಕ ಸಲಹೆಗಾರರನ್ನು ನೇಮಿಸಿಕೊಳ್ಳಲು ಅನುಮತಿ ನೀಡಲಾಗಿತ್ತು.