ತಿಂಗಳಲ್ಲಿ 900 ಶ್ವಾನಗಳ ಕಗ್ಗೊಲೆ
ಕಳೆದ ಡಿಸೆಂಬರ್ನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಅಧಿಕಾರಕ್ಕೆ ಬಂದರೆ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಭರವಸೆ ನೀಡಲಾಗಿತ್ತು. ಅದನ್ನು ನೆರವೇರಿಸಲು ಸರಪಂಚ, ಜನಪ್ರತಿನಿಧಿಗಳು ಸೇರಿ ಈ ಕೃತ್ಯ ನಡೆಸಿರುವ ಶಂಕೆಯಿದೆ. ಈ ಸಂಬಂಧ ಇಬ್ಬರ ವಿರುದ್ಧ ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತನಿಖೆ ವೇಳೆ ಪೊಲೀಸರು 70-80 ಶ್ವಾನಗಳ ಮೃತದೇಹಗಳನ್ನು ಸಮಾಧಿಯಿಂದ ಹೊರತೆಗೆದಿದ್ದಾರೆ.
ಮೊದಲು ಹನಮಕೊಂಡ ಜಿಲ್ಲೆಯಲ್ಲಿ 300, ಕಾಮರೆಡ್ಡಿಯಲ್ಲಿ 200, ಯಾಚಾರಂ ಗ್ರಾಮದಲ್ಲಿ 100 ನಾಯಿಗಳನ್ನು ವಿಷವಿಕ್ಕಿ ಕೊಲ್ಲಲಾಗಿತ್ತು.==
ಇನ್ನು ಸಿಬಿಎಸ್ಇ ಶಾಲೆಗಳಲ್ಲಿ ಆಪ್ತ ಸಮಾಲೋಚಕರ ನೇಮಕ ಕಡ್ಡಾಯ-ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕ್ರಮಕೋಟಾ: ವಿದ್ಯಾರ್ಥಿಗಳಲ್ಲಿ ಖಿನ್ನತೆ, ಒತ್ತಡ, ಏಕಾಗ್ರತೆ ಕೊರತೆಯಂತಹ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತನ್ನ ಎಲ್ಲ ಶಾಲೆಗಳಲ್ಲಿ ಆಪ್ತ ಸಮಾಲೋಚಕರ ನೇಮಕವನ್ನು ಕಡ್ಡಾಯಗೊಳಿಸಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿನಿಎಸ್ಇ) ಮಹತ್ವದ ನಿರ್ಧಾರ ಕೈಗೊಂಡಿದೆ.
ಸಿಬಿಎಸ್ಇ ಶಾಲೆಗಳಲ್ಲಿ ಆಪ್ತಸಮಾಲೋಚಕರ ನಿಯೋಜನೆಯನ್ನು ಕಡ್ಡಾಯಗೊಳಿಸುವಂತೆ ಕೋರಿ ಕೋಟಾದ ಕೆಲವರು ರಾಜಸ್ಥಾನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಸಿಬಿಎಸ್ಇ ಕಾನೂನಿಗೆ ತಿದ್ದುಪಡಿ ತಂದಿದೆ. ಇದರನ್ವಯ ಸಿಬಿಎಸ್ಇ ಶಾಲೆಗಳು ಪ್ರತಿ 500 ವಿದ್ಯಾರ್ಥಿಗೆ ಒಬ್ಬ ಪೂರ್ಣಾವಧಿ ಸಮಾಲೋಚಕ, ಸ್ವಾಸ್ಥ್ಯ ಶಿಕ್ಷಕ ಅಥವಾ ಸಾಮಾಜಿಕ-ಭಾವನಾತ್ಮಕ ಸಲಹೆಗಾರ ಹಾಗೂ ವೃತ್ತಿ ಸಲಹೆಗಾರರನ್ನು ನೇಮಿಸುವುದು ಕಡ್ಡಾಯವಾಗಿದೆ.ಈ ಹಿಂದೆ, 9ರಿಂದ 12ನೇ ತರಗತಿಗಳವರೆಗಿನ 300ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿ ಮಾತ್ರ ಪೂರ್ಣ ಸಮಯದ ಆಪ್ತ ಸಮಾಲೋಚಕರ ನೇಮಕಕ್ಕೆ ಅವಕಾಶವಿತ್ತು. ಆದರೆ ಸಣ್ಣ ಶಾಲೆಗಳಿಗೆ ಅರೆಕಾಲಿಕ ಸಲಹೆಗಾರರನ್ನು ನೇಮಿಸಿಕೊಳ್ಳಲು ಅನುಮತಿ ನೀಡಲಾಗಿತ್ತು.