ಅಂಗಾಂಗ ದಾನ ಮಾಡಿದ ಬಾಲಕನಿಗೆ ಒಡಿಶಾದಲ್ಲಿ ಸರ್ಕಾರಿ ಗೌರವದ ವಿದಾಯ

KannadaprabhaNewsNetwork |  
Published : Mar 06, 2024, 02:15 AM IST
ಸುಭಜಿತ್‌ ಸಾಹು | Kannada Prabha

ಸಾರಾಂಶ

ಒಡಿಶಾದಲ್ಲಿ ಅಪಸ್ಮಾರದಿಂದ ಮೃತಪಟ್ಟ 2ನೇ ತರಗತಿ ಬಾಲಕನ ಅಂಗಾಂಗ ದಾನಗಳನ್ನು ಪೋಷಕರು ದಾನ ಮಾಡಿದ ಹಿನ್ನೆಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಭುವನೇಶ್ವರ: ತನ್ನ ಸಾವಿನ ಬಳಿಕ ಅಂಗಾಂಗ ದಾನ ಮಾಡಿದ 2ನೇ ತರಗತಿ ಬಾಲಕನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಿದ ಮನಮಿಡಿಯುವ ಘಟನೆ ಒಡಿಶಾದಲ್ಲಿ ನಡೆದಿದೆ.

ಸುಭಜಿತ್‌ ಸಾಹು ಎಂಬ ಎರಡನೇ ತರಗತಿಯ ಬಾಲಕ ಕಳೆದ ಬುಧವಾರ ತನ್ನ ಶಾಲಾ ಪರೀಕ್ಷೆಯನ್ನು ಬರೆಯುವಾಗ ಮೆದುಳಿನಲ್ಲಿ ಅಪಸ್ಮಾರ ಉಂಟಾಗಿ ಮೃತಪಟ್ಟಿದ್ದ.

ಈ ಹಿನ್ನೆಲೆಯಲ್ಲಿ ಆತನ ಪೋಷಕರು ಸುಭಜಿತ್‌ನ ಯಕೃತ್ತು, ಶ್ವಾಸಕೋಶ, ಕಣ್ಣು, ಹೃದಯ, ಕರುಳು ಮುಂತಾದ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದರು.

ಒಡಿಶಾ ಸರ್ಕಾರವು ಅಂಗಾಂಗ ದಾನ ಮಾಡಿದ ವ್ಯಕ್ತಿಗಳನ್ನು ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವುದಾಗಿ ಪ್ರಕಟಿಸಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ