ಬಲೂಚಿಸ್ತಾನ ಆತ್ಮಹತ್ಯಾ ಬಾಂಬ್‌ಗೆ 6 ಬಲಿ

KannadaprabhaNewsNetwork |  
Published : May 22, 2025, 01:22 AM ISTUpdated : May 22, 2025, 11:18 AM IST
ಬಲೂಚ್ | Kannada Prabha

ಸಾರಾಂಶ

ಇತ್ತೀಚೆಗಷ್ಟೇ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನದ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದ್ದು, ಶಾಲಾ ಬಸ್‌ ಮೇಲೆ ಅತ್ಮಾಹುತಿ ಬಾಂಬ್ ದಾಳಿ ನಡೆದಿದೆ.

 ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನದ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದ್ದು, ಶಾಲಾ ಬಸ್‌ ಮೇಲೆ ಅತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಸ್ಫೋಟದಲ್ಲಿ 3 ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದು, ಸುಮಾರು 38 ಮಂದಿ ಗಾಯಗೊಂಡಿದ್ದಾರೆ.

ಇಲ್ಲಿನ ಖುಜ್ದಾರ್‌ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ. ಸುಧಾರಿತ ಸ್ಫೋಟಕ ಬಳಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆತ್ಮಾಹುತಿ ಬಾಂಬ್‌ನಿಂದ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯನ್ನು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಖಂಡಿಸಿದ್ದಾರೆ.

ಭಾರತದ ಕೈವಾಡ- ಪಾಕ್ ಆರೋಪ:  ಬಲೂಚಿಸ್ತಾನದಲ್ಲಿ ನಡೆದ ಈ ಕೃತ್ಯದ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕ್ ಆರೋಪಿಸಿದೆ. ಆದರೆ ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಸ್ಪಷ್ಟ ಪಡಿಸಿದ್ದು, ‘ಈ ದಾಳಿಯಲ್ಲಿ ಭಾರತದ ಕೈವಾಡವಿದೆ ಎನ್ನುವ ಆಧಾರರಹಿತ ಆರೋಪವನ್ನು ಭಾರತ ನಿರಾಕರಿಸುತ್ತದೆ. ಜಾಗತಿಕ ಭಯೋತ್ಪಾದನೆಯ ಕೇಂದ್ರ ಬಿಂದು ಎನ್ನುವ ಹಣೆಪಟ್ಟಿಯನ್ನು ಪಾಕಿಸ್ತಾನ ಬೇರೆಡೆಗೆ ತಿರುಗಿಸುವ ಪ್ರಯತ್ನವಿದು’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ