ಗ್ಯಾನವಾಪಿ ಶಿವಲಿಂಗ ಕಾರಂಜಿ ಸ್ವಚ್ಛತೆಗೆ ಸುಪ್ರೀಂ ಕೋರ್ಟ್‌ ಅನುಮತಿ

KannadaprabhaNewsNetwork |  
Published : Jan 17, 2024, 01:48 AM ISTUpdated : Jan 17, 2024, 12:23 PM IST
ಗ್ಯಾನವಾಪಿ ಮಸೀದಿ ಸ್ವಚ್ಛತೆ | Kannada Prabha

ಸಾರಾಂಶ

ವಾರಾಣಸಿಯಲ್ಲಿ ವಿವಾದಿತ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.

ನವದೆಹಲಿ: ವಾರಾಣಸಿಯ ಗ್ಯಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಹೋಲುವ ಶಿಲೆ ಪತ್ತೆಯಾಗಿದ್ದ ನೀರಿನ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ.

ಈ ಕಾರಂಜಿಯಲ್ಲಿ ಕೆಲವು ಮೀನುಗಳು ಸತ್ತಿದ್ದು, ಅದನ್ನು ಶುಚಿಗೊಳಿಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದೂ ಪರ ಅರ್ಜಿದಾರರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಪರ ಅರ್ಜಿದಾರರು ಕಾರಂಜಿ ಸ್ವಚ್ಛಗೊಳಿಸುವುದು ನಮ್ಮ ಜವಾಬ್ದಾರಿ ಎಂದಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್‌, ನ್ಯಾ।ಜೆ.ಬಿ.ಪರ್ದೀವಾಲಾ ಮತ್ತು ನ್ಯಾ।ಮನೋಜ್‌ ಮಿಶ್ರಾ ಅವರಿದ್ದ ಪೀಠ, ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ನೇತೃತ್ವದಲ್ಲಿ ಕಾರಂಜಿ ಸ್ವಚ್ಛಗೊಳಿಸಲು ಅನುಮತಿ ನೀಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿಂದೂರದ ವೇಳೆ ಅಡಗಲು ಸೂಚನೆ ಇತ್ತು: ಜರ್ದಾರಿ
2025 ಸಾರ್ಥಕ ವರ್ಷ: ಮನ್‌ ಕಿ ಬಾತ್‌ನಲ್ಲಿ ಮೋದಿ