ದಿಲ್ಲಿ ಅಬಕಾರಿ ಹಗರಣ: ಕವಿತಾಗೆ ಜಾಮೀನು ನೀಡಲು ಸುಪ್ರೀಂ ನಕಾರ

KannadaprabhaNewsNetwork |  
Published : Mar 23, 2024, 01:00 AM IST
ಕವಿತಾ | Kannada Prabha

ಸಾರಾಂಶ

ದಿಲ್ಲಿ ಅಬಕಾರಿ ಹಗರಣದಲ್ಲಿ ಕವಿತಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ನವದೆಹಲಿ: ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಲು ಬಿಆರ್‌ಎಸ್‌ ನಾಯಕಿ ಕೆ. ಕವಿತಾಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಜಾಮೀನು ಕೋರಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಮೊದಲು ವಿಚಾರಣಾ ಕೋರ್ಟ್‌ಗೆ ಹೋಗಿ ನಂತರ ಇಲ್ಲಿ ಜಾಮೀನು ಅರ್ಜಿ ಸಲ್ಲಿಸಿ.

ನೇರವಾಗಿ ಇಲ್ಲಿ ಬರುವುದು ಶಿಷ್ಟಾಚಾರದ ಉಲ್ಲಂಘನೆ ಎಂದು ಹೇಳಿ ಅರ್ಜಿ ವಜಾ ಮಾಡಿತು.

ಇನ್ನು ಅಕ್ರಮ ಹಣ ವರ್ಗಾವಣೆ ಕೇಸು ಪ್ರಶ್ನಿಸಿದ್ದ ಕವಿತಾ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟು, ಇ.ಡಿ.ಗೆ ನೋಟಿಸ್‌ ನೀಡಿ 6 ವಾರದಲ್ಲಿ ಉತ್ತರಿಸಲು ತಿಳಿಸಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ