ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪ್ರಾರ್ಥನೆಗೆ ತಡೆ ನೀಡಲು ಸುಪ್ರೀಂ ನಕಾರ

KannadaprabhaNewsNetwork |  
Published : Apr 02, 2024, 01:06 AM IST
ಜ್ಞಾನವಾಪಿ ಮಸೀದಿ | Kannada Prabha

ಸಾರಾಂಶ

ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ನೀಡಿದ ಅನುಮತಿ ರದ್ದುಪಡಿಸಬೇಕೆಂಬ ಕೋರಿಕೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ವಿಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ನೀಡಿದ ಅನುಮತಿ ರದ್ದುಪಡಿಸಬೇಕೆಂಬ ಕೋರಿಕೆಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಕುರಿತು ಮಸೀದಿ ಆಡಳಿತ ಮಂಡಳಿ ಮಾಡಿದ್ದ ಮನವಿಯನ್ನು ಅದು ತಿರಸ್ಕರಿಸಿದೆ. ಆದರೆ ಮಸೀದಿ ಸಮಿತಿಯ ಅರ್ಜಿಯ ಹಿನ್ನೆಲೆಯಲ್ಲಿ, ಅಭಿಪ್ರಾಯ ಬಯಸಿ ಕಾಶಿ ವಿಶ್ವನಾಥ ದೇಗುಲ ಟ್ರಸ್ಟಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ಜೊತೆಗೆ ಮಸೀದಿಯಲ್ಲಿ ವ್ಯಾಪ್ತಿಯಲ್ಲಿ ಮುಸ್ಲಿಮರಿಗೆ ನಮಾಜ್‌ ಮಾಡಲು ಇರುವ ಅವಕಾಶವೂ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಹೇಳಿ, ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ದೇಗುಲದ ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ಫೆ.26ರಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ಹೊರಡಿಸಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!
ಸಮರ ಬಿಸಿ: ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ