ಲಖನೌ: ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಒಂದು ವಾರದ ಬಳಿಕ ಉತ್ತರಪ್ರದೇಶದ ಮಾಜಿ ಉಪಮುಖ್ಯಮಂತ್ರಿ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ಗೆ ಪತ್ರ ಬರೆದಿರುವ ಮೌರ್ಯ, ‘ಫೆ.13ರಂದು ನಾನು ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ನನ್ನೊಂದಿಗೆ ಮಾತನಾಡುವ ಯಾವುದೇ ಪ್ರಯತ್ನವನ್ನು ಪಕ್ಷ ಮಾಡಲಿಲ್ಲ.
ಈ ಹಿನ್ನೆಲೆಯಲ್ಲಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಮೌರ್ಯ ಗುರುವಾರ ‘ರಾಷ್ಟ್ರೀಯ ಶೋಷಿತ್ ಸಮಾಜ ಪಾರ್ಟಿ’ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.