ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ ಆರ್.ಶರತ್ ಕುಮಾರ್ ತಮ್ಮ ಪಕ್ಷ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿಯನ್ನು (ಎಐಎಸ್ಎಂಕೆ) ಮಂಗಳವಾರ ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗ ಈ ಬೆಳೆವಣಿಗೆ ನಡೆದಿದೆ.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹೊಗಳಿದ ಶರತ್, ‘ಮೋದಿಯ ನಾಯಕತ್ವ ಏಕತೆಯ ಬೆಳವಣಿಗೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಪೋಷಿಸುವ ಮೂಲಕ ದೇಶವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ಯುವಜನತೆ ಭವಿಷ್ಯ ಉಜ್ವಲವಾಗಿರುತ್ತದೆ’ ಎಂದು ಹೇಳಿದರು.