‘ಶ್ರೀರಾಮನು ತನ್ನ ಪತ್ನಿ ಸೀತಾದೇವಿಯಿಂದ ಬೇರ್ಪಟ್ಟ ನಂತರ ಮಾನಸಿಕ ಸ್ಥಿಮಿತ (ಪ್ರಜ್ಞೆ) ಕಳೆದುಕೊಂಡಿದ್ದ’ ಎಂದು ತಮಿಳು ಕವಿ ವೈರಮುತ್ತು ಅವರುಆಡಿದ ಮಾತುಗಳು ವಿವಾದಕ್ಕೀಡಾಗಿವೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಮ್ಮುಖದಲ್ಲೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ ಹಾಗೂ ಹಿಂದು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
- ಸೀತೆಯಿಂದ ಬೇರ್ಪಟ್ಟ ರಾಮನಿಗೆ ಪ್ರಜ್ಞೆಯೇ ಇರಲಿಲ್ಲ:
- ಮಾನಸಿಕ ಸ್ಥಿಮಿತ ಕಳಕೊಂಡು ವರ್ತಿಸಿದ್ದ: ವೈರಮುತ್ತು
- ತಮಿಳ್ನಾಡು ಸಿಎಂ ಸ್ಟಾಲಿನ್ ಸಮ್ಮುಖದಲ್ಲೇ ಹೇಳಿಕೆ
- ಹೇಳಿಕೆಗೆ ಬಿಜೆಪಿ, ಹಿಂದು ಸಂಘಟನೆಗಳ ತೀವ್ರ ಖಂಡನೆಪಿಟಿಐ ಚೆನ್ನೈ
‘ಶ್ರೀರಾಮನು ತನ್ನ ಪತ್ನಿ ಸೀತಾದೇವಿಯಿಂದ ಬೇರ್ಪಟ್ಟ ನಂತರ ಮಾನಸಿಕ ಸ್ಥಿಮಿತ (ಪ್ರಜ್ಞೆ) ಕಳೆದುಕೊಂಡಿದ್ದ’ ಎಂದು ತಮಿಳು ಕವಿ ವೈರಮುತ್ತು ಅವರುಆಡಿದ ಮಾತುಗಳು ವಿವಾದಕ್ಕೀಡಾಗಿವೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಮ್ಮುಖದಲ್ಲೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ ಹಾಗೂ ಹಿಂದು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.
‘ರಾಮಾಯಣ’ ಮಹಾಕಾವ್ಯದ ತಮಿಳು ಆವೃತ್ತಿಯನ್ನು ಬರೆದ ಪ್ರಾಚೀನ ಕವಿ ಕಂಬನ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿದ ಸಭೆಯಲ್ಲಿ ಮಾತನಾಡಿದ ವೈರಮುತ್ತು, ‘ಸೀತೆಯಿಂದ ಬೇರ್ಪಟ್ಟ ನಂತರ, ರಾಮನಿಗೆ ತಾನು ಏನು ಮಾಡುತ್ತಿದ್ದೇನೆ ಎಂಬುದೇ ತಿಳಿಯುತ್ತಿರಲಿಲ್ಲ. ಆತ ಪ್ರಜ್ಞೆಯನ್ನು ಕಳೆದುಕೊಂಡ. ಅಂತಹ ಸ್ಥಿತಿಯಲ್ಲಿ ಮಾಡಿದ ಅಪರಾಧಗಳನ್ನು ಈಗಿನ ಐಪಿಸಿ (ಭಾರತೀಯ ದಂಡ ಸಂಹಿತೆ) ಸೆಕ್ಷನ್ 84 ರ ಅಡಿಯಲ್ಲಿ ಅಪರಾಧಗಳೆಂದು ಪರಿಗಣಿಸುವುದಿಲ್ಲ. ತಮಿಳು ರಾಮಾಯಣ ಬರೆದೆ ಕಂಬನ್ ಅವರಿಗೆ ಈ ಕಾನೂನಿನ ಬಗ್ಗೆ ಅರವಿಲ್ಲದೇ ಇರಬಹುದು. ಆದರೆ ಅವರಿಗೆ ಸಮಾಜ ಮತ್ತು ಮಾನವ ಮನಸ್ಸು ಹೇಗಿದೆ ಎಂಬುದು ತಿಳಿದಿತ್ತು’ ಎಂದರು.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಮಾಜಿ ಕೇಂದ್ರ ಸಚಿವ ಎಸ್. ಜಗದ್ರಕ್ಷಕನ್ ಈ ವೇಳೆ ಉಪಸ್ಥಿತರಿದ್ದರು.
ಸುಗ್ರೀವನ ಜತೆ ಜಗಳ ಮಾಡಿಕೊಂಡಿದ್ದ ಕಿಷ್ಕಿಂದೆಯ ರಾಜ ವಾಲಿಯನ್ನು ರಾಮನು ಕೊಂದಿದ್ದನ್ನು ಉಲ್ಲೇಖಿಸಿ ಅವರು ಈ ಮಾತನ್ನು ಹೇಳಿದರು. ಈ ಸಾದೃಶ್ಯದಲ್ಲಿ ರಾಮನು ಹಿಂದಿನಿಂದ ಬಂದು ವಾಲಿಯನ್ನು ಕೊಲ್ಲುತ್ತಾನೆ. ಕೆಲವರು ಈ ರೀತಿ ಅವಿತುಕೊಂಡು ದಾಳಿ ಮಾಡಿದ್ದು ತಪ್ಪು ಎಂದು ವಾದಿಸುತ್ತಾರೆ.
ಬಿಜೆಪಿ ಗರಂ:
‘ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ, ವೈರಮುತ್ತು ಅವರ ಹೇಳಿಕೆಗಳನ್ನು ಮುಖ್ಯಮಂತ್ರಿಗಳು ಒಪ್ಪುತ್ತಾರೆಯೇ?’ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ ಅವರು ವೈರಮುತ್ತು ಅವರನ್ನು ‘ಮೂರ್ಖ’ ಮತ್ತು ‘ಬುದ್ಧಿಹೀನ ವ್ಯಕ್ತಿ’ ಎಂದು ಕರೆದಿದ್ದಾರೆ.ವೈರಮುತ್ತು ‘ಪುನರಾವರ್ತಿತ ಅಪರಾಧಿ’. ಈ ಹಿಮದೆ ಹಿಂದು ದೇವತೆ ಆಂಡಾಳ್ ಬಗ್ಗೆ ಆಡಿದ ನುಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದವು’ ಎಂದಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.