ಟಿಕೆಟ್‌ ಸಿಗದೇ ಎಂಡಿಎಂಕೆ ಸಂಸದ ಗಣೇಶಮೂರ್ತಿ ಆತ್ಮಹತ್ಯೆ ಯತ್ನ

KannadaprabhaNewsNetwork |  
Published : Mar 25, 2024, 12:53 AM ISTUpdated : Mar 25, 2024, 03:22 PM IST
ಗಣೇಶ್‌ಮೂರ್ತಿ | Kannada Prabha

ಸಾರಾಂಶ

ಈರೋಡ್‌ ಕ್ಷೇತ್ರದ ಡಿಎಂಕೆ ಲೋಕಸಭಾ ಸಂಸದ ಗಣೇಶಮೂರ್ತಿ ಭಾನುವಾರ ‘ಸಲ್ಫಾಸ್‌’ ಎಂಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಈರೋಡ್: ಈರೋಡ್‌ ಕ್ಷೇತ್ರದ ಎಂಡಿಎಂಕೆ ಲೋಕಸಭಾ ಸಂಸದ ಗಣೇಶಮೂರ್ತಿ ಭಾನುವಾರ ‘ಸಲ್ಫಾಸ್‌’ ಎಂಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೊಯಮತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅವರು 2019 ಲೋಕಸಭೆ ಚುನಾವಣೆಯಲ್ಲಿ ಎಂಡಿಎಂಕೆಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಈ ಚುನಾವಣೆಯಲ್ಲಿ ಅವರಿಗೆ ಎಂಡಿಎಂಕೆ ಟಿಕೆಟ್‌ ನಿರಾಕರಿಸಿದೆ. ಹೀಗಾಗಿ ಖಿನ್ನರಾಗಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. 

ಮನೆಯಲ್ಲಿ ದಿಢೀರನೇ ಅಸ್ವಸ್ಥಗೊಂಡಿದ್ದರಿಂದ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಪಾಸಣೆ ನಂತರ ಐಸಿಯುಗೆ ಸೇರಿಸಲಾಗಿದ್ದು, ವೇಂಟಿಲೇಟರ್‌ನಲ್ಲಿ ಇಡಲಾಗಿದೆ.

ಆದರೆ ಅವರ ಆತ್ಮಹತ್ಯೆ ಯತ್ನದ ಬಗ್ಗೆ ಪ್ರತಿಕ್ರಿಯೆಗೆ ಪೊಲೀಸರು ನಿರಾಕರಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ