ತೆಲಂಗಾಣದ ಉಚಿತ ಬಸ್ ಪ್ರಯಾಣದ ಲಾಭ!
ಬಾಲಕಿ ತಪ್ಪಿಸಿಕೊಂಡಿರುವುದಾಗಿ ನೀಡಲಾದ ದೂರನ್ನು ಆಧರಿಸಿ ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯನ್ನು ಹೈದರಾಬಾದ್ನ ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪೋಷಕರ ವಶಕ್ಕೆ ನೀಡಿದ್ದಾರೆ. ವಿದ್ಯಾರಣ್ಯಪುರಿಯ ನಿವಾಸಿಯಾದ ಬಾಲಕಿ ಖಾಸಗಿ ಶಾಲೆಯೊಂದರ ಹಾಸ್ಟೆಲ್ನಲ್ಲಿದ್ದುಕೊಂಡು 8ನೇ ತರಗತಿಯಲ್ಲಿ ಓದುತ್ತಿದ್ದು, ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿರುವ ತಾತನ ಮನೆಗೆ ತೆರಳಿದ್ದಳು. ರಜೆಯ ಬಳಿಕ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್ಗೆ ಹೋಗಲು ಇಷ್ಟವಿಲ್ಲದೇ ಒಂದಾದ ಮೇಲೋಂದು ಬಸ್ ಬದಲಾಯಿಸುತ್ತಾ ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ. ಬಸ್ ಹತ್ತಿಸಿದ ಬಳಿಕ ಬಾಲಕಿ ಊರು ತಲುಪಿಲ್ಲ ಎಂಬುದರಿಂದ ಆತಂಕಗೊಂಡ ಆಕೆಯ ತಾತ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತಕ್ಷಣವೇ ಹುಡುಕಾಟ ಆರಂಭಿಸಿದ್ದರು.