ತೆಲಂಗಾಣ: ಬಿಸಿಲ ಬೇಗೆ ಹಿನ್ನೆಲೆ ಅರ್ಧದಿನ ಮಾತ್ರ ಶಾಲೆ ತೆರೆಯಲು ಆದೇಶ

KannadaprabhaNewsNetwork |  
Published : Mar 09, 2024, 01:33 AM ISTUpdated : Mar 09, 2024, 09:15 AM IST
ತೆಲಂಗಾಣ | Kannada Prabha

ಸಾರಾಂಶ

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ

ಹೈದರಾಬಾದ್‌: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. 

ಮಾ.15ರಿಂದ ಏ. 23ರ ವರೆಗೂ ಅಂದರೆ ಈ ವರ್ಷದ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ. ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. 

ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ರವರೆಗೆ ಮಾತ್ರ ಶಾಲೆಯನ್ನು ತೆರೆಯಲಿದ್ದು, ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಮಂಡಳಿ ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಷ್ಯಾದ ಯಾಕುಟಿಯಾದಲ್ಲಿ- 56 ಡಿ.ಸೆ. ತಾಪ ದಾಖಲು
ಹಾರುವ ಮೊದಲೇ ಕೇರಳದ ವಿಮಾನ ಸಂಸ್ಥೆ ಸಂಕಷ್ಟದಲ್ಲಿ