ಕಾಂಗ್ರೆಸ್‌ನಲ್ಲಿನ್ನು ಜಿಲ್ಲಾ ಘಟಕಗಳೇ ಪವರ್‌ಫುಲ್‌

KannadaprabhaNewsNetwork |  
Published : Mar 19, 2025, 12:31 AM IST
ಕಾಂಗ್ರೆಸ್ | Kannada Prabha

ಸಾರಾಂಶ

ತನ್ನ ಜಿಲ್ಲಾ ಘಟಕಗಳನ್ನು ಸಂಘಟನೆಯ ಕೇಂದ್ರ ಬಿಂದುವನ್ನಾಗಿಸಿಕೊಂಡು, ಅವುಗಳಿಗೆ ಪೂರ್ಣ ಬಲ ತುಂಬಲು ಕಾಂಗ್ರೆಸ್‌ ನಿರ್ಧರಿಸಿದೆ.

ನವದೆಹಲಿ: ತನ್ನ ಜಿಲ್ಲಾ ಘಟಕಗಳನ್ನು ಸಂಘಟನೆಯ ಕೇಂದ್ರ ಬಿಂದುವನ್ನಾಗಿಸಿಕೊಂಡು, ಅವುಗಳಿಗೆ ಪೂರ್ಣ ಬಲ ತುಂಬಲು ಕಾಂಗ್ರೆಸ್‌ ನಿರ್ಧರಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ, ಮಂಗಳವಾರ ವಿವಿಧ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು ಭೇಟಿಯಾಗಿ ಸಭೆ ನಡೆಸಿದ ಬೆನ್ನಲ್ಲೆ ಈ ನಿರ್ಧಾರ ಹೊರಬಿದ್ದಿದೆ.

‘ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು ಮಾ.27, 28 ಮತ್ತು ಏ.3ರಂದು 3 ಬ್ಯಾಚ್‌ಗಳಲ್ಲಿ ದೆಹಲಿಯ ಇಂದಿರಾ ಗಾಂಧಿ ಭವನದಲ್ಲಿ ಸಭೆ ಸೇರಲಿದ್ದಾರೆ. ಈ ಸಭೆಯಲ್ಲಿ ಜಿಲ್ಲಾ ಘಟಕಗಳನ್ನು ಹೇಗೆ ಬಲಪಡಿಸಬಹುದು ಎಂಬುದರ ಬಗ್ಗೆ ಸ್ವತಃ ಜಿಲ್ಲಾ ಅಧ್ಯಕ್ಷರಿಂದಲೇ ಮಾಹಿತಿ ಪಡೆಯಲಾಗುತ್ತದೆ. ಸಭೆ ಜಿಲ್ಲಾ ಘಟಕಗಳ ಬಲವರ್ಧನೆಯತ್ತ ಕೇಂದ್ರೀಕರಿಸಿರುತ್ತದೆ. ಬೆಳಗಾವಿಯಲ್ಲಿ ನಡೆದ ನವ ಸತ್ಯಾಗ್ರಹ ಸಂಕಲ್ಪದಲ್ಲಿ 2025 ಸಂಘಟನೆಯನ್ನು ಬಲಪಡಿಸುವ ವರ್ಷವಾಗಲಿದೆ ಎಂದು ಹೇಳಿದ್ದೆವು. ಅದಕ್ಕೆ ಅನುಗುಣವಾಗಿಯೇ ಈ ಸಭೆ ನಡೆಯಲಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದರು.

==

ನರೇಗಾದಡಿ 150 ದಿನ ಕೆಲಸ, 400 ರು ವೇತನ: ಸೋನಿಯಾ ಆಗ್ರಹ

ನವದೆಹಲಿ: ನರೇಗಾ ಯೋಜನೆಯಡಿ ದುಡಿಯುತ್ತಿರುವ ಕಾರ್ಮಿಕರ ಕನಿಷ್ಟ ವೇತನವನ್ನು ದಿನಕ್ಕೆ 400 ರು.ಗೆ ನಿಗದಿಪಡಿಸಬೇಕು. ವರ್ಷದ 100 ದಿನದ ದುಡಿಮೆಯ ಬದಲು 150 ದಿನಕ್ಕೆ ಹೆಚ್ಚಿಸಬೇಕು ಎಂದು ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸೋನಿಯಾ ಗಾಂಧಿ ‘ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬಿಜೆಪಿ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಆಧಾರ್ ಸಂಖ್ಯೆ ಆಧಾರಿತ ಪಾವತಿ, ಮೊಬೈಲ್ ಮೂಲಕ ಹಾಜರಾತಿ ಸೇರಿದಂತೆ ಹಲವು ಸಮಸ್ಯೆಗಳಿವೆ. ಸರ್ಕಾರ ಈ ಯೋಜನೆ ಉಳಿಸಿಕೊಳ್ಳಲು ಕೆಲಸ ಮಾಡಬೇಕಿದೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ ಆರ್ಥಿಕತೆಗೆ ಏಟು ನೀಡಲು ದುಬೈಗೆ ಇರಾನ್‌ ಭಾರಿ ದಾಳಿ
ಭಾರತಕ್ಕೆ ಬೇಕಿದ್ದ ಪಾಕ್‌ ಉಗ್ರ ಅನಾಮಿಕ ವ್ಯಕ್ತಿ ಗುಂಡಿಗೆ ಬಲಿ