ಪತಿ, 2ನೇ ಪ್ರೇಮಿ ಜೊತೆ ಸೇರಿಮೊದಲನೇ ಪ್ರೇಮಿ ಹತ್ಯೆಗೈದಳು

KannadaprabhaNewsNetwork |  
Published : Jun 13, 2025, 04:08 AM IST
ಕೊಲೆ | Kannada Prabha

ಸಾರಾಂಶ

ಮಧುಚಂದ್ರಕ್ಕೆಂದು ಕರೆದೊಯ್ದು, ಪ್ರೇಮಿಯೊಂದಿಗೆ ಸೇರಿಕೊಂಡು ನವವಿವಾಹಿತೆಯೊಬ್ಬಳು ಪತಿಯ ಹತ್ಯೆಗೈದ ಸುದ್ದಿ ದೇಶದಲ್ಲೇ ಸಂಚಲನ ಸೃಷ್ಟಿಸಿರುವ ಹೊತ್ತಿನಲ್ಲಿ, ಮಹಿಳೆಯೊಬ್ಬಳು ತನ್ನ ಪತಿ ಹಾಗೂ 2ನೇ ಪ್ರೇಮಿಯೊಂದಿಗೆ ಸೇರಿಕೊಂಡು ಮೊದಲನೇ ಪ್ರಿಯತಮನನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ.

ಪರಪುರುಷನ ಜತೆ ಸಂಬಂಧಕ್ಕೆ ಆಕ್ಷೇಪಿಸಿದ್ದಕ್ಕೆ ಲವರ್‌ ಕೊಲೆ

ಲಖನೌ: ಮಧುಚಂದ್ರಕ್ಕೆಂದು ಕರೆದೊಯ್ದು, ಪ್ರೇಮಿಯೊಂದಿಗೆ ಸೇರಿಕೊಂಡು ನವವಿವಾಹಿತೆಯೊಬ್ಬಳು ಪತಿಯ ಹತ್ಯೆಗೈದ ಸುದ್ದಿ ದೇಶದಲ್ಲೇ ಸಂಚಲನ ಸೃಷ್ಟಿಸಿರುವ ಹೊತ್ತಿನಲ್ಲಿ, ಮಹಿಳೆಯೊಬ್ಬಳು ತನ್ನ ಪತಿ ಹಾಗೂ 2ನೇ ಪ್ರೇಮಿಯೊಂದಿಗೆ ಸೇರಿಕೊಂಡು ಮೊದಲನೇ ಪ್ರಿಯತಮನನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ.

ಇಲ್ಲಿನ ರಹೀಮಾಬಾದ್‌ ನಿವಾಸಿಯಾಗಿದ್ದ ವಿಜಯ್‌ ಕುಮಾರ್‌ ಅಲಿಯಾಸ್‌ ಗಪ್ಪು ಮೃತ ದುರ್ದೈವಿ. ಜೂ.8ರಂದು ಗಪ್ಪುವಿನ ಶವ ಆತನ ಮನೆ ಬಳಿ ಪತ್ತೆಯಾಗಿತ್ತು. ತನಿಖೆ ಬಳಿಕ ಕುಂತಿ ರಾವತ್‌, ಆಕೆಯ ಪತಿ ರಾಂಭಜನ್‌ ಮತ್ತು ಜಬ್ಬಾರ್‌ನನ್ನು ಬಂಧಿಸಲಾಯಿತು.

ಏನಿದು ಘಟನೆ?:

ಗಪ್ಪುವಿನ ಪತ್ನಿ 3 ವರ್ಷಗಳ ಹಿಂದೆ ಮೃತಪಟ್ಟಿದ್ದುಳು. ಬಳಿಕ ಆತ, ತನ್ನ ಸಂಬಂಧಿಯಾದ ರಾಂಭಜನ್‌ನ ಹೆಂಡತಿ ಕುಂತಿ ಜತೆ ಸಂಬಂಧ ಬೆಳೆಸಿದ್ದ. ಕುಂತಿ ತನ್ನ ಪತಿಯ ಊಟಕ್ಕೆ ಮದ್ಯ ಸೇರಿಸಿ ಮತ್ತು ಬರಿಸಿ, ಗಪ್ಪು ಜತೆ ಕಾಲ ಕಳೆಯುತ್ತಿದ್ದಳು, ಅವನೊಂದಿಗೆ ಸುತ್ತಾಡುತ್ತಿದ್ದಳು. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಅವರ ಪರಿವಾರದಲ್ಲಿ ಗಲಾಟೆ ಸೃಷ್ಟಿಸಿತು.

ಕೆಲ ಕಾಲದ ಬಳಿಕ ಕುಂತಿ, ಇನ್ನೊಬ್ಬನೊಂದಿಗೆ ಸಂಬಂಧ ಹೊಂದಿರುವ ವಿಷಯ ತಿಳಿದು ಗಪ್ಪು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ. ಇದರಿಂದ ಕೋಪಗೊಂಡಾಕೆ ತನ್ನ ಪತಿ ಹಾಗೂ ಇನ್ನೊಬ್ಬ ಪ್ರಿಯಕರನೊಂದಿಗೆ ಸೇರಿ, ಗಪ್ಪುವಿನ ಕತ್ತು ಸೀಳಿ ಕೋಂದು, ದೇಹವನ್ನು ಮನೆಯ ಹತ್ತಿರ ಎಸೆದಿದ್ದಳು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ