ಗೋಧ್ರಾ ಗಲಭೆ ಬಗ್ಗೆ ಸತ್ಯ ಈಗ ಹೊರಕ್ಕೆ ಬರುತ್ತಿದೆ: ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ- ಮೋದಿ

KannadaprabhaNewsNetwork |  
Published : Nov 18, 2024, 12:02 AM ISTUpdated : Nov 18, 2024, 06:28 AM IST
PM Modi in Nigeria

ಸಾರಾಂಶ

‘ಸತ್ಯ (ಗೋಧ್ರೋತ್ತರ ಗಲಭೆ) ಕೊನೆಗೂ ಹೊರಬರುತ್ತಿದೆ. ಅದೂ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ. ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ.

ನವದೆಹಲಿ: ‘ಸತ್ಯ (ಗೋಧ್ರೋತ್ತರ ಗಲಭೆ) ಕೊನೆಗೂ ಹೊರಬರುತ್ತಿದೆ. ಅದೂ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ. ಸುಳ್ಳು ಕತೆ ಹೆಚ್ಚು ದಿನ ಉಳಿಯುವುದಿಲ್ಲ. ಕ್ರಮೇಣ ಸತ್ಯ ಹೊರಗೆ ಬರಲೇಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಬಿಡುಗಡೆಯಾದ ‘ಸಾಬರಮತಿ ರಿಪೋರ್ಟ್‌’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಕರಸೇವೆ ಮಾಡಿ ಬಂದ 59 ಕರಸೇವಕರು ಇದ್ದ ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿಗೆ 2002ರಲ್ಲಿ ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿತ್ತು. ಬಳಿಕ ಇದರ ಸೇಡಿಗೆ ಗುಜರಾತ್ ದಂಗೆ ನಡೆದಿತ್ತು. ಈ ಘಟನೆಗಳಿಗೆ ಕಾರಣವಾದ ವಿಷಯಗಳ ಬಗ್ಗೆ ವಿಕ್ರಾಂತ್‌ ಮಸ್ಸೆ ನಟನೆಯ ಸಾಬರಮತಿ ರಿಪೋರ್ಟ್‌ ಚಿತ್ರ ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದೆ.

ಅದಕ್ಕೆ ಸಂಬಂಧಿಸಿದ ಟ್ವೀಟ್‌ ಒಂದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ತಾವು ಆರೋಪಿಯಾಗಿ ಕ್ಲೀನ್‌ಚಿಟ್‌ ಪಡೆದ ಗೋಧ್ರಾ ಹತ್ಯಾಕಾಂಡದ ವಿಷಯದಲ್ಲಿ ಪ್ರಚಲಿತದಲ್ಲಿರುವ ಕತೆಗಳು ಸುಳ್ಳು ಎಂಬುದನ್ನು ಈ ಸಿನಿಮಾ ಹೊರಗೆಡವಿದೆ ಎಂದು ಶ್ಲಾಘಿಸಿದ್ದಾರೆ.2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆ ನಡೆದ ವೇಳೆ ನರೇಂದ್ರ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. ನಂತರ ಗುಜರಾತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ದಾಳಿಗಳು ನಡೆದಿದ್ದವು. ಅವುಗಳಿಗೆ ಮೋದಿ ಕುಮ್ಮಕ್ಕು ನೀಡಿದ್ದರು ಎಂದು ಆರೋಪಿಸಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ