ಅಯೋಧ್ಯೆ ಮಂದಿರಕ್ಕೆ ಮೈಸೂರಿಗನ ವಿಗ್ರಹ?

KannadaprabhaNewsNetwork |  
Published : Jan 02, 2024, 02:15 AM IST
ಅರುಣ್‌ ಯೋಗಿರಾಜ್‌ | Kannada Prabha

ಸಾರಾಂಶ

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀರಾಮ ಮಂದಿರಕ್ಕೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ರಚಿಸಿರುವ ವಿಗ್ರಹ ಅಂತಿಮವಾಗಿದೆ ಎನ್ನಲಾಗಿದ್ದು, ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಹೊರಬಂದಿಲ್ಲ ಎಂದು ಸ್ವತಃ ಅರುಣ್‌ ಹೇಳಿದ್ದಾರೆ.

ನನಗೆ ಅಧಿಕೃತ ಮಾಹಿತಿ ಬಂದಿಲ್ಲನಾನು ಕೆತ್ತಿದ ವಿಗ್ರಹ ಆಯ್ಕೆಯಾಗಿದೆಯೋ? ಇಲ್ಲವೋ ಎಂಬುದರ ಕುರಿತು ಈವರೆಗೆ ನನಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಬಿಜೆಪಿ ನಾಯಕರ ಟ್ವೀಟರ್‌ ಪೋಸ್ಟ್‌ಗಳು ನನ್ನ ವಿಗ್ರಹ ಆಯ್ಕೆಯಾಗಿರಬಹುದು ಎಂಬ ನಂಬಿಕೆಯನ್ನು ಮೂಡಿಸಿದೆ. ಏನೇ ಆದರೂ ಮುಖ್ಯ ವಿಗ್ರಹ ಕೆತ್ತಲು ಆಯ್ಕೆಯಾದ ದೇಶದ ಮೂವರಲ್ಲಿ ನಾನೂ ಒಬ್ಬ ಎಂಬ ಹೆಮ್ಮೆ, ಖುಷಿ ನನಗಿದೆ.- ಅರುಣ್‌ ಯೋಗಿರಾಜ್, ಮೈಸೂರಿನ ಶಿಲ್ಪಿ--ನವದೆಹಲಿ: ಜ.22ರಂದು ಉದ್ಘಾಟನೆಯಾಗಲಿರುವ ಅಯೋಧ್ಯೆಯ ನೂತನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳಲು ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿರುವ ಬಾಲರಾಮನ ವಿಗ್ರಹ ಆಯ್ಕೆಯಾಗಿದೆ ಎಂಬ ವದಂತಿಯೊಂದು ಸೋಷಿಯಲ್‌ ಮೀಡಿಯಾಗಳಲ್ಲಿ ಹಬ್ಬಿದೆ. ಈ ಬಗ್ಗೆ ಅಧಿಕೃತವಾಗಿ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಭಗವಂತ ಖೂಬಾ, ಬಿಜೆಪಿ ಸಂಸದರಾದ ಪ್ರತಾಪ್‌ ಸಿಂಹ, ಪಿ.ಸಿ. ಮೋಹನ್‌ ಸೇರಿದಂತೆ ಹಲವಾರು ನಾಯಕರು ಮೈಸೂರು ಶಿಲ್ಪಿಯ ವಿಗ್ರಹ ಆಯ್ಕೆಯಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.ಈ ಕುರಿತು ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀರಾಮಮಂದಿರ ನಿರ್ಮಾಣ ಟ್ರಸ್ಟ್ ಇದುವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.

ಈ ನಡುವೆ ತಾವು ಕೆತ್ತಿದ ವಿಗ್ರಹ ಆಯ್ಕೆಯಾಗಿದೆ ಎಂಬ ವದಂತಿ ಬಗ್ಗೆ ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಅರುಣ್‌, ‘ನಾನು ಕೆತ್ತಿದ ವಿಗ್ರಹ ಆಯ್ಕೆಯಾಗಿದೆಯೋ? ಇಲ್ಲವೋ ಎಂಬುದರ ಕುರಿತು ಈವರೆಗೆ ನನಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಬಿಜೆಪಿ ನಾಯಕರ ಟ್ವೀಟರ್‌ ಪೋಸ್ಟ್‌ಗಳು, ನನ್ನ ವಿಗ್ರಹ ಆಯ್ಕೆಯಾಗಿರಬಹುದು ಎಂಬ ನಂಬಿಕೆಯನ್ನು ಮೂಡಿಸಿದೆ. ಏನೇ ಆದರೂ ಮುಖ್ಯ ವಿಗ್ರಹ ಕೆತ್ತಲು ಆಯ್ಕೆಯಾದ ದೇಶದ ಮೂವರಲ್ಲಿ ನಾನೂ ಒಬ್ಬ ಎಂಬ ಹೆಮ್ಮೆ, ಖುಷಿ ನನಗಿದೆ’ ಎಂದು ಹೇಳಿದ್ದಾರೆ.

ಕರ್ನಾಟಕದ ಅರುಣ್ ಯೋಗಿರಾಜ್‌, ಕರ್ನಾಟಕದ ಇಡಗುಂಜಿಯ ಜಿ.ಎಲ್‌.ಭಟ್‌ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರಿಗೆ ತಲಾ ಒಂದೊಂದು ಬಾಲರಾಮನ ವಿಗ್ರಹ ಕೆತ್ತುವ ಹೊಣೆ ವಹಿಸಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾಂತಾರಾ ಹಿಂದಿಕ್ಕಿದ ಧುರಂಧರ್‌: 876 ಕೋಟಿ ಸಂಪಾದನೆಯ ದಾಖಲೆ
ಛತ್ತೀಸ್‌ಗಢ ಮದ್ಯ ಹಗರಣ: ಮಾಜಿ ಸಿಎಂ ಪುತ್ರಗೆ ₹250 ಕೋಟಿ ಲಂಚ