ಕೇದಾರನಾಥದಲ್ಲಿ ಭಾರಿ ಭಕ್ತ ಸಂದಣಿ: ನೂಕು ನುಗ್ಗಲು

KannadaprabhaNewsNetwork |  
Published : May 27, 2024, 01:06 AM ISTUpdated : May 27, 2024, 04:43 AM IST
ಕೇದಾರನಾಥ | Kannada Prabha

ಸಾರಾಂಶ

ಚಾರ್‌ಧಾಮಗಳಲ್ಲಿ ಒಂದಾದ ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

ಕೇದಾರನಾಥ: ಚಾರ್‌ಧಾಮಗಳಲ್ಲಿ ಒಂದಾದ ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನೂಕುನುಗ್ಗಲಿನ ಸ್ಥಿತಿ ಉಂಟಾಗಿದ್ದು, ಭಕ್ತರು ಸಿಲುಕಿ ಪರದಾಡಿದ ಘಟನೆ ಶನಿವಾರ ನಡೆದಿದೆ.

ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ, ಕೇದಾರನಾಥ ದೇಗುಲಕ್ಕೆ 40 ಕಿ.ಮೀ. ಸಮೀಪದ ಸೀತಾಪುರದಲ್ಲಿ ಕಾಲ್ನಡಿಗೆಯಲ್ಲಿ ಬಂದ ಸಾವಿರಾರು ಭಕ್ತರು ಮಾರ್ಗಮಧ್ಯೆ ಸಿಲುಕಿದ್ದಾರೆ. ಈ ಜನದಟ್ಟಣೆಯಲ್ಲಿ ವಾಹನಗಳೂ ಸಿಲುಕಿಕಿಕೊಂಡಿವೆ. ‘ಜನ ದಟ್ಟಣೆಯನ್ನು ನಿಯಂತ್ರಿಸಲು ಉತ್ತರಾಖಂಡ ಸರ್ಕಾರ ಯಾವುದೇ ಪರ್ಯಾಯ ವ್ಯವಸ್ಥೆ ಕಂಡುಕೊಂಡಿಲ್ಲ’ ಎಂದು ಭಕ್ತರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ಈ ನಡುವೆ ಕೆಲವರು, ಈಗ ಕೇದಾರನಾಥಕ್ಕೆ ಹೋಗಲು ಪ್ರಶಸ್ತ ಸಮಯವಲ್ಲ ಎಂದು ಟ್ವೀಟರ್‌ನಲ್ಲಿ ಮನವಿ ಮಾಡಿದ್ದಾರೆ.

ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಜೂ. 6ರ ವರೆಗೂ ಇದ್ದ ಚಾರ್ ಧಾಮ್ ಯಾತ್ರೆಯ ಆಫ್‌ಲೈನ್ ನೋಂದಣಿಯನ್ನು ಮೇ 31ಕ್ಕೆ ಇಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎಂಟೀವಿ ಮ್ಯೂಸಿಕ್‌ ಚಾನೆಲ್ ಬಂದ್‌!
ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು