ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ: ಕೇರಳ ಸಿಪಿಐ ಶಾಸಕ ಪೋಸ್ಟ್‌

KannadaprabhaNewsNetwork |  
Published : Jan 26, 2024, 01:48 AM ISTUpdated : Jan 26, 2024, 07:25 AM IST
ಬಾಲಚಂದ್ರನ್‌ | Kannada Prabha

ಸಾರಾಂಶ

ವನವಾಸದ ಸಂದರ್ಭದಲ್ಲಿ ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ ಮಾಡಿ ಬಡಿಸುತ್ತಿದ್ದಳು ಎಂದು ಕೇರಳ ತ್ರಿಶ್ಶೂರ್‌ ಶಾಸಕ ಬಾಲಚಂದ್ರನ್‌ ಪೋಸ್ಟ್ ಹಾಕಿ ವಿವಾದ ಸೃಷ್ಟಿಸಿದ್ದಾರೆ. ನಂತರ ಡಿಲೀಟ್‌ ಮಾಡಿ ಕ್ಷಮೆಯಾಚಿಸಿದ್ದಾರೆ.

ತ್ರಿಶ್ಶೂರ್: ವನವಾಸದ ವೇಳೆ ರಾಮ-ಲಕ್ಷ್ಮಣರಿಗೆ ಸೀತಾಮಾತೆ ಪರೋಟ ಮತ್ತು ಮಾಂಸದಡುಗೆ ಮಾಡಿ ಉಣಬಡಿಸುತ್ತಿದ್ದಳು ಎಂದು ಕೇರಳ ಸಿಪಿಐ ಶಾಸಕ ಬಾಲಚಂದ್ರನ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿ ವಿವಾದ ಸೃಷ್ಟಿಸಿದ್ದಾರೆ.

ಬಾಲಚಂದ್ರನ್‌ ಪೋಸ್ಟ್‌ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಬಿಜೆಪಿ ಘಟಕ, ಕಮ್ಯುನಿಸ್ಟರು ಮಾತ್ರವೇ ಈ ರೀತಿ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ತುಳಿಯಲು ಸಾಧ್ಯವಿದೆ.

ಅವರು ಹಾಕಿರುವ ಪೋಸ್ಟ್‌ ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದೆ. ವಿವಾದ ಭುಗಿಲೇಳುತ್ತಿದ್ದಂತೆ ಶಾಸಕ ಬಾಲಚಂದ್ರನ್‌ ಕ್ಷಮೆಯಾಚಿಸಿದ್ದು, ‘ನಾನು ಕೇಳಲ್ಪಟ್ಟ ರಾಮಾಯಣದ ಕತೆಯನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದೇನೆ.

ಇದರಿಂದಾಗಿ ರಾಮಭಕ್ತರಿಗೆ ನೋವುಂಟಾಗಿದ್ದರ ಕುರಿತು ಅವರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ತಿಳಿಸಿ ಪೋಸ್ಟ್‌ ಡಿಲೀಟ್‌ ಮಾಡಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಯು, ಅಮೆರಿಕ ಬಳಿಕ ಇನ್ನೂ 11 ದೇಶದ ಜತೆ ಟ್ರೇಡ್‌ ಡೀಲ್‌
ಆ್ಯಂಥ್ರೋಪಿಕ್‌ ಎಐನಿಂದ ವಿಶ್ವ ಟೆಕ್‌ ಲೋಕದಲ್ಲಿ ಬಿರುಗಾಳಿ!