ತಿರುಪತಿ ತುಪ್ಪ ಕಲಬೆರಕೆ ಗೊತ್ತಿದ್ದೂ ಟಿಟಿಡಿ ಖರೀದಿ ಮುಂದುವರಿಕೆ : ಸಿಬಿಐ

KannadaprabhaNewsNetwork |  
Published : Feb 09, 2026, 03:15 AM ISTUpdated : Feb 09, 2026, 05:14 AM IST
TTD

ಸಾರಾಂಶ

 ತಿರುಪತಿ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ರಾಸಾಯನಿಕಯುಕ್ತ ತುಪ್ಪ ಬಳಸುತ್ತಿರುವುದು  ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಇದರ ಅರಿವಿದ್ದೂ ಟಿಟಿಡಿ ಖರೀದಿ ಮುಂದುವರಿಸಿತ್ತು ಎಂದು ಸಿಬಿಐ  ಬಹಿರಂಗಪಡಿಸಿದೆ.

 ತಿರುಪತಿ: ವಿಶ್ವಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. 2019ರಿಂದ 2024ರ ಅವಧಿಯಲ್ಲಿ ರಾಸಾಯನಿಕಯುಕ್ತ ತುಪ್ಪ ಬಳಸುತ್ತಿರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಇದರ ಅರಿವಿದ್ದೂ ಟಿಟಿಡಿ ತುಪ್ಪ ಖರೀದಿ ಮುಂದುವರಿಸಿತ್ತು ಎಂದು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಬಹಿರಂಗಪಡಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐನ ವಿಶೇಷ ತನಿಖಾ ತಂಡ (ಎಸ್‌ಐಟಿ) ಆಂಧ್ರಪ್ರದೇಶ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ, ‘ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ನಡೆಸಿದ್ದ ಪರೀಕ್ಷೆಯಲ್ಲಿ, ತುಪ್ಪದಲ್ಲಿ ಬೀಟಾ-ಸೆಟೊಸ್ಟೆರಾಲ್ ಎಂಬ ರಾಸಾಯನಿಕ ಇರುವಿಕೆ ಪತ್ತೆ ಹಚ್ಚಿತ್ತು. 

ಗಂಭೀರ ಗುಣಮಟ್ಟ ಸಮಸ್ಯೆ ಬಗ್ಗೆ ತಿಳಿದಿದ್ದರೂ ಕ್ರಮ ಕೈಗೊಳ್ಳಲು ವಿಫಲ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗಂಭೀರ ಗುಣಮಟ್ಟ ಸಮಸ್ಯೆ ಬಗ್ಗೆ ತಿಳಿದಿದ್ದರೂ ಕ್ರಮ ಕೈಗೊಳ್ಳಲು ವಿಫಲವಾಯಿತು. 2020ರಲ್ಲಿ ಟಿಟಿಡಿ ಅಧಿಕಾರಿಗಳು ಮೊದಲು ತುಪ್ಪದ ಟೆಂಡರ್‌ ನಿಯಮಗಳನ್ನು ಬಿಗಿಗೊಳಿಸಿದರು. ಆದರೆ ಯಾವುದೇ ಸ್ಪಷ್ಟನೆ ಕೊಡದೆ ಕೇವಲ ಐದೇ ತಿಂಗಳಲ್ಲಿ ನಿಯಮಗಳನ್ನು ಸಡಿಲಗೊಳಿಸಿದರು’ ಎಂದು ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಗೊಗೋಯ್‌ ಪಾಕ್‌ ನಂಟಿನ ಬಗ್ಗೆ ಕೇಂದ್ರೀಯ ತನಿಖೆಗೆ ಶಿಫಾರಸು
ಅಮೆರಿಕ ಡೀಲ್‌ ವಿರುದ್ಧ ಫೆ.12ಕ್ಕೆ ದೇಶವ್ಯಾಪಿ ರೈತ ಪ್ರತಿಭಟನೆ