ನವದೆಹಲಿ: ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ, ಇ.ಡಿ., ಎನ್ಐಎ ಹಾಗೂ ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರನ್ನು ಬದಲಿಸುವಂತೆ ಆಗ್ರಹಿಸಿ ಟಿಎಂಸಿ ಪಕ್ಷದ ನಾಯಕರು ಸೋಮವಾರ ದೆಹಲಿಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಮಾತನಾಡಿದ ಟಿಎಂಸಿ ನಾಯಕರ ನಿಯೋಗ,‘ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ವಿಪಕ್ಷಗಳ ನಾಯಕರ ಮೇಲೆ ದಾಳಿ ಮಾಡಲು ಬಳಸಿಕೊಳ್ಳುತ್ತಿದೆ. ಹಾಗಾಗಿ ಅದರ ಮುಖ್ಯಸ್ಥರನ್ನು ಬದಲಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ’ ಎಂದು ಹೇಳಿತು.