ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ದಿ.ಹೀರಾಬೆನ್ ವಿರುದ್ಧ ಕೇಳು ನುಡಿಗಳನ್ನು ಆಡಿದ್ದ ತಮಿಳುನಾಡಿನ ಡಿಎಂಕೆ ಸಚಿವ ಅನಿತಾ ರಾಧಾಕೃಷ್ಣನ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೆನ್ನೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ದಿ.ಹೀರಾಬೆನ್ ವಿರುದ್ಧ ಕೇಳು ನುಡಿಗಳನ್ನು ಆಡಿದ್ದ ತಮಿಳುನಾಡಿನ ಡಿಎಂಕೆ ಸಚಿವ ಅನಿತಾ ರಾಧಾಕೃಷ್ಣನ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತೂತ್ತುಕುಡಿ ದಕ್ಷಿಣದ ಬಿಜೆಪಿ ಅಧ್ಯಕ್ಷ ಸಿದ್ರಾಂಗದನ್ ಈ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ ಡಿಎಂಕೆ ಸಚಿವ ಅನಿತಾ ರಾಧಾಕೃಷ್ಣನ್ ಅವರ ಹೇಳಿಕೆ ಖಂಡನೀಯ. ಇವರ ವಿರುದ್ಧ ಚುನಾವಣಾ ಆಯೋಗ ಹಾಗೂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 294 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.