ಕೆರೆಗೆ ಟ್ರ್ಯಾಕ್ಟರ್‌ ಉರುಳಿ ಏಳು ಮಕ್ಕಳು ಸೇರಿ 24 ಜನ ಸಾವು

KannadaprabhaNewsNetwork |  
Published : Feb 25, 2024, 01:46 AM ISTUpdated : Feb 25, 2024, 11:36 AM IST
ಕೆರೆಯಲ್ಲಿ ಟ್ರಾಲಿ | Kannada Prabha

ಸಾರಾಂಶ

ಕೆರೆಯೊಂದಕ್ಕೆ ಟ್ರ್ಯಾಕ್ಟರ್ನ ಟ್ರಾಲಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಭೀಕರ ಘಟನೆ ಉತ್ತರಪ್ರದೇಶದ ಕಸಗಂಜ್‌ನಲ್ಲಿ ನಡೆದಿದೆ. 

ಕಸ್‌ಗಂಜ್‌: ಇನ್ನೊದು ವಾಹನವನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್‌ ಟ್ರಾಲಿ ಕೆರೆಗೆ ಮುಗುಚಿ ಬಿದ್ದು 7 ಮಕ್ಕಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರಪ್ರದೇಶದ ಕಸ್‌ಗಂಜ್‌ ಜಿಲ್ಲೆಯ ಪಟಿಯಾಲಿ ದರಿಯಾಗಂಜ್‌ ರಸ್ತೆಯಲ್ಲಿ ನಡೆದಿದೆ.

ಈ ದುರ್ಘಟನೆಯಲ್ಲಿ 15-20ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಗಳಾಗಿದ್ದು ಎಲ್ಲರನ್ನೂ ಸಮೀಪದ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ. 

ಘಟನೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರು. ಪರಿಹಾರ ಘೋಷಿಸಿದ್ದಾರೆ. 

ಮಾಘಮಾಸದ ಹುಣ್ಣಿಮೆ ಪ್ರಯುಕ್ತ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅನಿಲ ಹೊತ್ತ ನಂದಾದೇವಿ, ತೈಲ ತುಂಬಿದ ಜಗ್‌ ಲಾಡ್ಕಿ ಗುಜರಾತ್‌ಗೆ
ಯುದ್ಧದ ಕಾರಣ ಎಲ್‌ಪಿಜಿ ಪೂರೈಕೆ : ಕೇಂದ್ರ ಸರ್ಕಾರದಿಂದ ದೊಡ್ಡ ವಾರ್ನಿಂಗ್