ಹೈದ್ರಬಾದ್‌ ಸ್ಫೋಟಕ್ಕೆ ಸಂಚು : ಇಬ್ಬರು ಐಸಿಸ್ ಉಗ್ರರ ಸೆರೆ

KannadaprabhaNewsNetwork |  
Published : May 18, 2025, 11:57 PM ISTUpdated : May 19, 2025, 04:41 AM IST
ಉಗ್ರ | Kannada Prabha

ಸಾರಾಂಶ

ಹೈದರಾಬಾದ್‌ನಲ್ಲಿ ಬೃಹತ್ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ತೆಲಂಗಾಣದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಸಯೀದ್ ಸಮೀರ್ (28) ಮತ್ತು ಸಿರಾಜ್-ಉರ್-ರೆಹಮಾನ್ (29) ಎಂದು ಗುರುತಿಸಲಾಗಿದೆ.

 ಹೈದರಾಬಾದ್: ಹೈದರಾಬಾದ್‌ನಲ್ಲಿ ಬೃಹತ್ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ತೆಲಂಗಾಣದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಸಯೀದ್ ಸಮೀರ್ (28) ಮತ್ತು ಸಿರಾಜ್-ಉರ್-ರೆಹಮಾನ್ (29) ಎಂದು ಗುರುತಿಸಲಾಗಿದೆ.

‘ಸಾಮಾಜಿಕ ಮಾಧ್ಯಮದ ಮೂಲಕ ಇವರಿಬ್ಬರ ಪರಿಚಯವಾಗಿತ್ತು. ಆ ಬಳಿಕ ಐಸಿಸ್‌ಗಾಗಿ ಕೆಲಸ ಮಾಡಲು ಆರಂಭಿಸಿದ್ದರು. ಆನ್ಲೈನ್ ಮೂಲಕ ಸ್ಫೋಟಕಗಳನ್ನು ಖರೀದಿಸಿ ವಿಜಿಯನಗರಂನಲ್ಲಿ ಪ್ರಯೋಗ ನಡೆಸಿದ್ದರು. ಈ ಪ್ರಯೋಗದ ಯಶಸ್ಸಿನೊಂದಿಗೆ, ಸೌದಿ ಅರೇಬಿಯಾದಲ್ಲಿರುವ ಉಗ್ರನ ನೆರವಿನೊಂದಿಗೆ ಹೈದರಾಬಅದ್‌ನಲ್ಲಿ ದೊಡ್ಡ ಸ್ಫೋಟವನ್ನು ಕೈಗೊಳ್ಳುವ ಸಂಚು ರೂಪಿಸಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರವಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಪೊಲೀಸರು ಬಂಧಿಸಿದ್ದರು. ಅದರ ಬೆನ್ನಲ್ಲೆ ಇನ್ನಿಬ್ಬರ ಸೆರೆಯಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲದಿದ್ದರೆ3ನೇ ವಿಶ್ವಯುದ್ಧ: ಟ್ರಂಪ್‌ ಎಚ್ಚರಿಕೆ
ನ್ಯಾ। ಸ್ವಾಮಿನಾಥನ್‌ ವಾಗ್ದಂಡನೆಗೆ 56 ನಿವೃತ್ತ ಜಡ್ಜ್‌ಗಳ ಕಿಡಿ