ಕೇರಳ: ಸ್ಫೋಟದ ಸ್ಥಳಕ್ಕೆ ಸಚಿವ ಆರ್‌ಸಿ ಭೇಟಿ

KannadaprabhaNewsNetwork |  
Published : Oct 31, 2023, 01:16 AM IST
ಕೇರಳದಲ್ಲಿ ಸಚಿವ ಆರ್‌ಸಿ | Kannada Prabha

ಸಾರಾಂಶ

ಭದ್ರತಾ ಪಡೆ, ಆರೋಗ್ಯ ಸಿಬ್ಬಂದಿಗೆ ಶ್ಲಾಘನೆ

ಕೊಚ್ಚಿ: ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಸೋಮವಾರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಭೇಟಿ ಮಾಡಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್‌ ಮಾಡಿರುವ ಅವರು,‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನನ್ನ ಸಹೋದ್ಯೋಗಿಗಳ ಪರವಾಗಿ ಇಂದು ಸ್ಫೋಟಗೊಂಡ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಜನರನ್ನು ವಿಚಾರಿಸಿದೆ. ಸಂತ್ರಸ್ಥರಿಗೆ ಕೂಡಲೇ ಚಿಕಿತ್ಸೆ ಕೊಡುತ್ತಿರುವ ಎಲ್ಲ ವೈದ್ಯಕೀಯ ಸಿಬ್ಬಂದಿ ಹಾಗೂ ಭದ್ರತಾ ಕಾರ್ಯ ನಡೆಸುತ್ತಿರುವ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ’ ಎಂದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕಕ್ಕೆ ತಲೆನೋವಾದ ಇರಾನ್‌ ಅಗ್ಗದ ಅಸ್ತ್ರಗಳು
ನಾಯಕನಿಲ್ಲದ ಇರಾನ್‌ಗೆ ನೇತೃತ್ವ ಯಾರದ್ದು?