ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ದಲಿತ ಮಹಿಳೆ ಕೊಲೆ?

KannadaprabhaNewsNetwork |  
Published : Nov 21, 2024, 01:05 AM ISTUpdated : Nov 21, 2024, 04:23 AM IST
ದಲಿತ ಮಹಿಳೆ ಶವ | Kannada Prabha

ಸಾರಾಂಶ

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ 23 ವರ್ಷದ ಮಹಿಳೆ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಬುಧವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ 23 ವರ್ಷದ ಮಹಿಳೆ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಬುಧವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

‘ಮಹಿಳೆಗೆ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಸ್ಥಳೀಯ ಸಮಾಜವಾದಿ ಪಕ್ಷದ ಕಾರ್ಯಕರ್ತರೊಬ್ಬರು ಒತ್ತಡ ಹೇರುತ್ತಿದ್ದರು. 3 ದಿನಗಳ ಹಿಂದೆ ಎಸ್‌ಪಿ ಪಕ್ಷದ ಪ್ರಶಾಂತ್ ಯಾದವ್‌ ನಮ್ಮ ಮನೆಗೆ ಬಂದು ಸಮಾಜವಾದಿ ಪಕ್ಷದ ಸೈಕಲ್ ಚಿಹ್ನೆಗೆ ಮತ ಹಾಕುವಂತೆ ಕೇಳಿದ್ದರು.

 ಆದರೆ ನಮ್ಮ ಕುಟುಂಬಕ್ಕೆ ಪಿಎಂ ಆವಾಸ್‌ ಯೋಜನೆಯಡಿ ಮನೆ ದೊರೆತಿರುವುದರಿಂದ ಬಿಜೆಪಿ ಹಾಕುತ್ತೇವೆ ಎಂದು ಹೇಳಿದ್ದೆವು. ಈ ಕಾರಣಕ್ಕೆ ಕೊಲೆ ನಡೆದಿದೆ ’ ಎಂದು ಮೃತ ಮಹಿಳೆ ಕುಟುಂಬಸ್ಥರು ಹೇಳಿದ್ದಾರೆ. ಮಹಿಳೆಯ ತಂದೆ ನೀಡಿದ ದೂರಿನನ್ವಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ವಿಚಾರವಾಗಿ ಸಮಾಜವಾದಿ ಪಕ್ಷದ ನಡೆಗೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ