ಕುಂಭಮೇಳದಲ್ಲಿ ಇಂದು 10 ಕೋಟಿ ಜನರಿಂದ ಪುಣ್ಯಸ್ನಾನ

KannadaprabhaNewsNetwork |  
Published : Jan 29, 2025, 01:30 AM IST
ಮಹಾಕುಂಭ ಮೇಳ | Kannada Prabha

ಸಾರಾಂಶ

ಕಳೆದ 2 ವಾರಗಳಲ್ಲಿ ದೇಶ- ವಿದೇಶಗಳ ಕೋಟ್ಯಂತರ ಭಕ್ತರನ್ನು ಆಕರ್ಷಿಸಿರುವ ಪ್ರಯಾಗ್‌ರಾಜ್‌ನ ಕುಂಭಮೇಳ, ಬುಧವಾರ ಹೊಸ ಇತಿಹಾಸವೊಂದನ್ನು ಸೃಷ್ಟಿಸುವ ಸಾಧ್ಯತೆ ಇದೆ. ಬುಧವಾರ ಮೌನಿ ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ 10 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡುವ ಸಾಧ್ಯತೆ ಇದೆ.

ಮಹಾಕುಂಭನಗರ: ಕಳೆದ 2 ವಾರಗಳಲ್ಲಿ ದೇಶ- ವಿದೇಶಗಳ ಕೋಟ್ಯಂತರ ಭಕ್ತರನ್ನು ಆಕರ್ಷಿಸಿರುವ ಪ್ರಯಾಗ್‌ರಾಜ್‌ನ ಕುಂಭಮೇಳ, ಬುಧವಾರ ಹೊಸ ಇತಿಹಾಸವೊಂದನ್ನು ಸೃಷ್ಟಿಸುವ ಸಾಧ್ಯತೆ ಇದೆ. ಬುಧವಾರ ಮೌನಿ ಅಮವಾಸ್ಯೆ ಇರುವ ಹಿನ್ನೆಲೆಯಲ್ಲಿ 10 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಸ್ಥಳದಲ್ಲಿ ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಿದೆ. ಜೊತೆಗೆ ಮಹಾಕುಂಭ ಸ್ಥಳದಲ್ಲಿ ಶಸ್ತ್ರಚಿಕಿತ್ಸೆ ಒಳಗೊಂಡಂತೆ ಎಲ್ಲ ರೀತಿಯ ವೈದ್ಯಕೀಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಮಹಾಕುಂಭ ನಗರದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 300 ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ.

==

ಸದ್ಯಕ್ಕೆ ರಾಮಮಂದಿರಕ್ಕೆ ಬರಬೇಡಿ: ಟ್ರಸ್ಟ್‌ಅಯೋಧ್ಯೆ: ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಅಯೋಧ್ಯೆಯ ರಾಮಮಂದಿರಕ್ಕೆ ಕೂಡಾ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಅವರಿಗೆ ಸುಲಭ ದರ್ಶನ ವ್ಯವಸ್ಥೆ ಕಲ್ಪಿಸಲು ಸ್ಥಳೀಯರಿಗೆ 15-20 ದಿನಗಳ ಕಾಲ ರಾಮಮಂದಿರಕ್ಕೆ ಭೇಟಿ ನೀಡುವುದನ್ನು ಮುಂದೂಡಿಕೆ ಮಾಡಿ ಎಂದು ರಾಮ ಜನ್ಮಭೂಮಿ ಟ್ರಸ್ಟ್‌ ಸಲಹೆ ನೀಡಿದೆ.

ಜ.26ರಂದು ಗಣರಾಜ್ಯೋತ್ಸವದ ದಿನದಂದು 25 ಲಕ್ಷದಷ್ಟು ಭಾರೀ ಸಂಖ್ಯೆಯ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಆಗಮಿಸಿ ಬಾಲರಾಮನ ದರ್ಶನ ಪಡೆದಿದ್ದರು. ಸೋಮವಾರ ಕೂಡಾ 15 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದಾರೆ. ಈ ಸಂಖ್ಯೆ ಹಾಗೆಯೇ ಮುಂದುವರೆದಿದ್ದು ಜ.29ರಂದು ಕುಂಭಮೇಳದಲ್ಲಿ ಮೌನಿ ಅಮವಾಸ್ಯೆ ಇರುವ ಕಾರಣ ಭಾರೀ ಪ್ರಮಾಣದಲ್ಲಿ ಭಕ್ತರು ಆಗಮಿಸಲಿದ್ದು ಅವರೆಲ್ಲಾ ಆಯೋಧ್ಯೆಗೂ ಭೇಟಿ ನೀಡಲಿದ್ದಾರೆ. ಹೀಗಾಗಿ ಮುಂದಿನ 15-20 ದಿನಗಳ ಕಾಲ ಸ್ಥಳೀಯರು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡದೇ ಇರುವುದು ಒಳಿತು ಎಂದು ಟ್ರಸ್ಟ್‌ ಮನವಿ ಮಾಡಿದೆ. ಮೌನಿ ಅಮಾವಾಸ್ಯೆ ದಿನ ಕುಂಭಮೇಳದಲ್ಲಿ 10 ಕೋಟಿ ಜನರು ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ
ಆನೆಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು, 7 ಗಜ ಬಲಿ