ಹೈದ್ರಾಬಾದ್‌ಗೆ ಕನ್ನಡಿಗ ಸಜ್ಜನರ್‌ ಪೊಲೀಸ್‌ ಆಯುಕ್ತ

KannadaprabhaNewsNetwork |  
Published : Sep 28, 2025, 02:00 AM IST
ಸಜ್ಜನರ್‌  | Kannada Prabha

ಸಾರಾಂಶ

ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈದರಾಬಾದ್ : ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿ.ಸಿ. ಸಜ್ಜನರ್‌ ಅವರು ಈವರೆಗೆ ತೆಲಂಗಾಣ ರಸ್ತೆ ಸಾರಿಗೆ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ದಕ್ಷತೆಗೆ ಹೆಸರಾಗಿದ್ದ ಅವರು ಸಾರಿಗೆ ಇಲಾಖೆಯಲ್ಲಿ ಲಾಭದ ಹಳಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2019ರಲ್ಲಿ ತೆಲಂಗಾಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸೈಬರಾಬಾದ್‌ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾ*ರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಎನ್‌ಕೌಂಟರ್‌ ನಡೆದಿತ್ತು. ಈ ವೇಳೆ ಸಜ್ಜನ್‌ ಅಲ್ಲಿನ ಪೊಲೀಸ್‌ ಕಮಿಷನರ್‌ ಆಗಿದ್ದರು ಹಾಗೂ ಎನ್‌ಕೌಂಟರ್ ಸ್ಪೆಷಲಿಸ್ಟ್‌ ಎಂಬ ಹೆಗ್ಗಳಿಕೆ ಪಡೆದಿದ್ದರು.

ಮೂಲತಃ ಹುಬ್ಬಳ್ಳಿಯವರು:

ಆಂಧ್ರಪ್ರದೇಶ ಕೇಡರ್‌ನ 1996 ಬ್ಯಾಚ್‌ ಅಧಿಕಾರಿಯಾಗಿದ್ದ ಇವರು ಮೂಲತಃ ಕರ್ನಾಟಕದ ಹುಬ್ಬಳ್ಳಿಯವರು. ಹುಬ್ಬಳ್ಳಿಯ ಜೆಜಿ ಕಾಮರ್ಸ್‌ ಕಾಲೇಜಿನಲ್ಲಿ ವಾಣಿಜ್ಯ ಪದವಿ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಇರಾನ್‌ನಲ್ಲೀಗ ಸರ್ಕಾರದ ಬೆಂಬಲಿಗರ ಬಲಪ್ರದರ್ಶನ!
ಒಂದೇ ದಿನ 2 ಬಾರಿ ಪ್ರಜ್ಞೆ ತಪ್ಪಿದ ಧನಕರ್‌: ದಿಲ್ಲಿ ಏಮ್ಸ್‌ಗೆ ದಾಖಲು