ಜ್ಞಾನವಾಪಿ ಮಸೀದಿ ಹಿಂದೂಗಳಿಗೆ ಹಸ್ತಾಂತರಿಸಿ: ವಿಎಚ್‌ಪಿ

KannadaprabhaNewsNetwork |  
Published : Jan 28, 2024, 01:17 AM ISTUpdated : Jan 28, 2024, 07:01 AM IST
ಜ್ಞಾನವಾಪಿ ಮಸೀದಿ | Kannada Prabha

ಸಾರಾಂಶ

ಜ್ಞಾನವಾಪಿ ಮಸೀದಿ ಸಮೀಕ್ಷೆಯಲ್ಲಿ ಹಿಂದೂ ದೇವಾಲಯಕ್ಕೆ ಸಂಬಂಧಿಸಿದ ವಿಗ್ರಹಗಳು ಮತ್ತು ಶಿಲಾಶಾಸನಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕೂಡಲೇ ಅದನ್ನು ಹಿಂದೂ ಸಮುದಾಯಕ್ಕೆ ಹಸ್ತಾಂತರ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ಈ ಹಿಂದೆ ಹಿಂದೂ ದೇಗುಲವಾಗಿತ್ತು ಎಂಬ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಯನ್ನು ಹಿಂದೂ ದೇಗುಲ ಎಂದು ಘೋಷಿಸಬೇಕು ಹಾಗೂ ಹಿಂದೂ ಸಮುದಾಯಕ್ಕೆ ಹಸ್ತಾಂತರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಆಗ್ರಹಿಸಿದೆ. 

ಈಗಿರುವ ಜ್ಞಾನವಾಪಿ ಮಸೀದಿಯನ್ನು ಗೌರವಯುತವಾಗಿ ಮತ್ತೊಂದು ಜಾಗಕ್ಕೆ ಸ್ಥಳಾಂತರಿಸಿ ಆ ಜಾಗವನ್ನು ಕಾಶಿ ವಿಶ್ವನಾಥ ಮಂದಿರದ ಸುಪರ್ದಿಗೆ ನೀಡಬೇಕು. 

ಹಿಂದೂ ಧಾರ್ಮಿಕ ಸ್ಥಳಗಳ ಕಾಯಿದೆ ಸೆಕ್ಷನ್‌ 4ರ ಪ್ರಕಾರವೂ ಸಹ ಈ ಜಾಗವನ್ನು ಹಿಂದೂ ದೇಗುಲವೆಂದು ಘೋಷಣೆ ಮಾಡಬೇಕು ಎಂದು ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಜ್ಞಾನವಾಪಿ ಮಸೀದಿಯ ಸಮೀಕ್ಷೆಯಲ್ಲಿ ಮಸೀದಿಯ ಪ್ರಾಂಗಣದಲ್ಲಿ ಹಲವು ಹಿಂದೂ ದೇವರ ವಿಗ್ರಹಗಳು ಮತ್ತು ಅದರ ಕುರಿತಾದ ಶಿಲಾಶಾಸನಗಳಿರುವುದಾಗಿ ಉಲ್ಲೇಖಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ನಾವು ಭಾರತೀಯರೇ ಅಲ್ಲ: ಮೃತ ಕೊರಿಯಾ ಪ್ರೇಮಿ ಸೋದರಿಯರು
ರಷ್ಯಾ-ಅಮೆರಿಕ ಕೊನೆಯ ಅಣು ಒಪ್ಪಂದ ನಿನ್ನೆ ಅಂತ್ಯ: ಆತಂಕ