ಜ್ಞಾನವಾಪಿ ಮಸೀದಿ ಹಿಂದೂಗಳಿಗೆ ಹಸ್ತಾಂತರಿಸಿ: ವಿಎಚ್‌ಪಿ

KannadaprabhaNewsNetwork |  
Published : Jan 28, 2024, 01:17 AM ISTUpdated : Jan 28, 2024, 07:01 AM IST
ಜ್ಞಾನವಾಪಿ ಮಸೀದಿ | Kannada Prabha

ಸಾರಾಂಶ

ಜ್ಞಾನವಾಪಿ ಮಸೀದಿ ಸಮೀಕ್ಷೆಯಲ್ಲಿ ಹಿಂದೂ ದೇವಾಲಯಕ್ಕೆ ಸಂಬಂಧಿಸಿದ ವಿಗ್ರಹಗಳು ಮತ್ತು ಶಿಲಾಶಾಸನಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕೂಡಲೇ ಅದನ್ನು ಹಿಂದೂ ಸಮುದಾಯಕ್ಕೆ ಹಸ್ತಾಂತರ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ವಾರಾಣಸಿ: ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ಈ ಹಿಂದೆ ಹಿಂದೂ ದೇಗುಲವಾಗಿತ್ತು ಎಂಬ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಯನ್ನು ಹಿಂದೂ ದೇಗುಲ ಎಂದು ಘೋಷಿಸಬೇಕು ಹಾಗೂ ಹಿಂದೂ ಸಮುದಾಯಕ್ಕೆ ಹಸ್ತಾಂತರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಆಗ್ರಹಿಸಿದೆ. 

ಈಗಿರುವ ಜ್ಞಾನವಾಪಿ ಮಸೀದಿಯನ್ನು ಗೌರವಯುತವಾಗಿ ಮತ್ತೊಂದು ಜಾಗಕ್ಕೆ ಸ್ಥಳಾಂತರಿಸಿ ಆ ಜಾಗವನ್ನು ಕಾಶಿ ವಿಶ್ವನಾಥ ಮಂದಿರದ ಸುಪರ್ದಿಗೆ ನೀಡಬೇಕು. 

ಹಿಂದೂ ಧಾರ್ಮಿಕ ಸ್ಥಳಗಳ ಕಾಯಿದೆ ಸೆಕ್ಷನ್‌ 4ರ ಪ್ರಕಾರವೂ ಸಹ ಈ ಜಾಗವನ್ನು ಹಿಂದೂ ದೇಗುಲವೆಂದು ಘೋಷಣೆ ಮಾಡಬೇಕು ಎಂದು ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಜ್ಞಾನವಾಪಿ ಮಸೀದಿಯ ಸಮೀಕ್ಷೆಯಲ್ಲಿ ಮಸೀದಿಯ ಪ್ರಾಂಗಣದಲ್ಲಿ ಹಲವು ಹಿಂದೂ ದೇವರ ವಿಗ್ರಹಗಳು ಮತ್ತು ಅದರ ಕುರಿತಾದ ಶಿಲಾಶಾಸನಗಳಿರುವುದಾಗಿ ಉಲ್ಲೇಖಿಸಲಾಗಿದೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ