ಗೋಧ್ರಾ ರೈಲು ದುರಂತಕ್ಕೆ ಬಲಿಯಾದವರ ಕುಟುಂಬ ಸದಸ್ಯರಿಗೂ ಆಹ್ವಾನ

KannadaprabhaNewsNetwork |  
Published : Jan 22, 2024, 02:17 AM ISTUpdated : Jan 22, 2024, 09:33 AM IST
ರೈಲಿಗೆ ಬೆಂಕಿ | Kannada Prabha

ಸಾರಾಂಶ

ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್‌ ತಿಳಿಸಿದೆ.

ಅಯೋಧ್ಯೆ: 2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡದಲ್ಲಿ ಮಡಿದಿದ್ದ ಅಯೋಧ್ಯಾ ಕರಸೇವಕರ ಕುಟುಂಬ ಸದಸ್ಯರಿಗೂ ಮಂದಿರ ಪ್ರಾಣಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವಿಶ್ವ ಹಿಂದೂ ಪರಿಷತ್‌ ಮೂಲಗಳು, ‘ಗೋಧ್ರಾ ಹತ್ಯಾಕಾಂಡದಲ್ಲಿ ವೀರಮರಣ ಹೊಂದಿದ್ದ 39 ಕರಸೇವಕರ ಪೈಕಿ 20 ಕರಸೇವಕರ ಕುಟುಂಬದ ವಿಳಾಸವನ್ನು ಪತ್ತೆಹಚ್ಚಿ ಅವರಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಬರುವಂತೆ ಆಹ್ವಾನ ನೀಡಲಾಗಿದೆ.

ಈ ಪೈಕಿ 19 ಮಂದಿ ಕಾರ್ಯಕ್ರಮಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ’ ಎಂದು ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ ಡೀಲ್‌ ವಿರುದ್ಧ ಫೆ.12ಕ್ಕೆ ದೇಶವ್ಯಾಪಿ ರೈತ ಪ್ರತಿಭಟನೆ
ಸಂಘ ಹೇಳಿದರೆ ಸ್ಥಾನ ಬಿಟ್ಟ ಬಿಡುವೆ : ಮೋಹನ್‌ ಭಾಗ್ವತ್‌