ಸತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಕಿಡಿಗೇಡಿಗಳ ಗುಂಪೊಂದು ಹರಿಯುವ ನದಿಗೆ 50 ದನಗಳನ್ನು ಎಸೆದಿದ್ದು, ಅದರಲ್ಲಿ 15-20 ಹಸುಗಳು ಸಾವನ್ನಪ್ಪಿರುವ ಅಮಾನವೀಯ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳವಾರ ಈ ಘಟನೆ ನಡೆದಿದ್ದು, ಬಹ್ಮೋರ್ನ ರೈಲ್ವೆ ಹಳಿ ಸಮೀಪದಲ್ಲಿರುವ ಸತ್ನಾ ನದಿಗೆ ಸುಮಾರು 50 ಹಸುಗಳನ್ನು ಹರಿಯುವ ನದಿಗೆ ಎಸೆಯಲಾಗಿದೆ. ಈ ಪೈಕಿ 15 ರಿಂದ 20 ಹಸುಗಳು ಸಾವನ್ನಪ್ಪಿದ್ದು, ಉಳಿದ ದನಗಳ ರಕ್ಷಣೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
==ಫೆಮಾ ಕಾಯ್ದೆ ಉಲ್ಲಂಘನೆ: ಡಿಎಂಕೆಯ ಜಗದ್ರಕ್ಷನ್ಗೆ 908 ಕೋಟಿ ರು. ದಂಡ
==
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಎಎಸ್ಎಲ್ ಭದ್ರತೆ!ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ಗೆ ಈಗಾಗಲೇ ನೀಡಲಾಗಿರುವ ಝಡ್ ಶ್ರೇಣಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅಡ್ವಾನ್ಸ್ ಸೆಕ್ಯೂರಿಟಿ ಲೈಸನ್ (ಎಎಸ್ಎಲ್) ಭದ್ರತೆಯನ್ನು ಒದಗಿಸಲಾಗಿದೆ.
ಎಎಸ್ಎಲ್ ಭದ್ರತೆಯನ್ನು ಈಗಾಗಲೇ ಹೊಂದಿರುವ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಪಟ್ಟಿಗೆ ಭಾಗವತ್ ಸೇರ್ಪಡೆಯಾಗಿದ್ದಾರೆ.ಝಡ್ ಶ್ರೇಣಿ ಭದ್ರತೆಯನ್ನು ಹೊಂದಿರುವ ಎಲ್ಲರಿಗೂ ಎಎಸ್ಎಲ್ ಭದ್ರತೆಯನ್ನು ನೀಡುವುದಿಲ್ಲ, ಈ ಭದ್ರತೆಯನ್ನು ಸುರಕ್ಷತೆ ಪರಿಶೀಲನೆ ಕಾರಣಕ್ಕೆ ನೀಡಲಾಗುತ್ತದೆ. ಇದರ ಪ್ರಕಾರ ನಾಯಕರು ಭೇಟಿ ನೀಡುವ ಸ್ಥಳದ ಪೂರ್ವಭಾವಿ ಪರಿಶೀಲನೆ, ಸ್ಥಳೀಯ ಪೊಲೀಸರ ಜೊತೆ ಸಮಾಲೋಚನೆ, ಸಂಭವನೀಯ ಅಪಾಯು ಎದುರಿಸಲು ಬೇಕಾದ ಕಾರ್ಯತಂತ್ರ ರಚನೆ ಸೇರಿದಂತೆ ಸುರಕ್ಷತೆ ಪರಿಶೀಲನೆಯ ಹಲವು ಕಾರ್ಯಗಳನ್ನು ಒಳಗೊಂಡಿರುತ್ತದೆ.