ಬಿಎಸ್ಪಿ ಅಧ್ಯಕ್ಷೆ ಮಾಯಾ ಉತ್ತರಾಧಿಕಾರಿ ಆಕಾಶ್‌ಗೆ ಪಕ್ಷದಿಂದ ಪಕ್ಷದಿಂದಲೇ ಗೇಟ್‌ಪಾಸ್‌

KannadaprabhaNewsNetwork |  
Published : Mar 03, 2025, 01:47 AM ISTUpdated : Mar 03, 2025, 04:59 AM IST
ಬಿಎಸ್‌ಪಿ | Kannada Prabha

ಸಾರಾಂಶ

ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿದ್ದ, ಅವರ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ಪಕ್ಷ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಮಾಯಾವತಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಪಕ್ಷದಲ್ಲಿನ ಬಿನ್ನಮತ ದೊಡ್ಡಮಟ್ಟದಲ್ಲಿ ಸ್ಫೋಟಗೊಂಡಿದೆ.

ಲಖನೌ: ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿದ್ದ, ಅವರ ಸೋದರಳಿಯ ಆಕಾಶ್‌ ಆನಂದ್‌ ಅವರನ್ನು ಪಕ್ಷ ಮತ್ತು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ ಮಾಯಾವತಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಪಕ್ಷದಲ್ಲಿನ ಬಿನ್ನಮತ ದೊಡ್ಡಮಟ್ಟದಲ್ಲಿ ಸ್ಫೋಟಗೊಂಡಿದೆ.

ಅಶೋಕ್ ಸಿದ್ಧಾರ್ಥ್ ಪಕ್ಷವನ್ನು 2 ಬಣಗಳಾಗಿ ವಿಭಜಿಸಲು ಸಂಚು ರೂಪಿಸಿದರು, ಅದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ. ಆಕಾಶ್ ಮೇಲೆ ಅವರ ಹೆಂಡತಿ, ಮಾವನ ಪ್ರಭಾವವಿದೆ. ಇದೇ ಕಾರಣಕ್ಕೆ ಪಕ್ಷಕ್ಕೆ ಆಗುವ ನಷ್ಟವನ್ನು ತಪ್ಪಿಸಲು ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.

ಅಕಾಶ್‌ ಬದಲಿಗೆ ರಾಜ್ಯಸಭಾ ಸಂಸದ ರಾಮ್‌ಜಿ ಗೌತಮ್ ಹಾಗೂ ತಮ್ಮ ಕಿರಿಯ ಸಹೋದರ ಆನಂದ್ ಕುಮಾರ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿದ್ದಾರೆ. ಆಕಾಶ್ ಆನಂದ್ ಅವರನ್ನು ತಮ್ಮ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿರುವುದು ಇದು 2ನೇ ಬಾರಿ. ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ಮೊದಲ ಬಾರಿಗೆ ಅವರನ್ನು ವಜಾಗೊಳಿಸಲಾಗಿತ್ತು. ಬಳಿಕ ಜುಲೈನಲ್ಲಿ ಮರುನೇಮಕ ಮಾಡಿ ರಾಜಕೀಯ ನೇತೃತ್ವ ವಹಿಸಿದ್ದರು. ಇದೀಗ ಮತ್ತೆ ಸಂಬಂಧದಲ್ಲಿ ಬಿರುಕು ಮೂಡಿದ್ದು, ತಾವು ಬದುಕಿರುವವರೆಗೂ ಪಕ್ಷದಲ್ಲಿ ಯಾರೂ ತಮ್ಮ ಉತ್ತರಾಧಿಕಾರಿಯಾಗುವುದಿಲ್ಲ ಎಂದು ಮಾಯಾವತಿ ಘೋಷಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ