ಯುಪಿ ಪೊಲೀಸ್‌ ನೇಮಕ ಪರೀಕ್ಷೆಯಲ್ಲಿ ಅಕ್ರಮ: ಮರು ಪರೀಕ್ಷೆಗೆ ನಿರ್ಧಾರ

KannadaprabhaNewsNetwork |  
Published : Feb 25, 2024, 01:46 AM ISTUpdated : Feb 25, 2024, 11:33 AM IST
ಪರೀಕ್ಷೆ | Kannada Prabha

ಸಾರಾಂಶ

ಉತ್ತರ ಪ್ರದೇಶದಲ್ಲಿ ನಡೆದ ಪೊಲೀಸ್‌ ಕಾನ್ಸ್‌ಟೇಬಲ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿ ಮರುಪರೀಕ್ಷೆ ಮಾಡುವಂತೆ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಕಾನ್ಸ್‌ಟೆಬಲ್‌ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಖಚಿತಪಟಟ್ಟ ಹಿನ್ನೆಲೆಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆಯನ್ನೇ ಯುಪಿ ಸರ್ಕಾರ ರದ್ದು ಪಡಿಸಿದೆ.

ಜೊತೆಗೆ ಮುಂದಿನ 6 ತಿಂಗಳಲ್ಲಿ ಹೊಸದಾಗಿ ಪರೀಕ್ಷೆ ನಡೆಸುವ ಭರವಸೆ ನೀಡಿದೆ. ಫೆ.17-18ರಂದು 48 ಲಕ್ಷ ಆಕಾಂಕ್ಷಿಗಳು ಪರೀಕ್ಷೆ ಬರೆದಿದ್ದರು.

ಆದರೆ ಇದರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ನಡೆದಿದೆ. ಈ ಅಕ್ರಮಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ 240ಕ್ಕೂ ಹೆಚ್ಚಿನ ಜನರನ್ನು ಬಂಧಿಸಿದ್ದಾರೆ.

ಇದರ ತನಿಖೆ ನಡೆಸಲು ವಿಶೇಷ ಕಾರ್ಯಪಡೆ ರಚಿಸಿದೆ. ಜೊತೆಗೆ ಇನ್ನು ಆರು ತಿಂಗಳಿನಲ್ಲಿ ಮರು ಪರೀಕ್ಷೆ ನಡೆಸಲು ಆದೇಶಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಜನನಾಯಗನ್‌ಗೆ ಸಿಹಿ - ಕಹಿ! - ಜ.21ರವರೆಗೆ ವಿಜಯ್‌ ನಟನೆಯ ಚಿತ್ರ ಬಿಡುಗಡೆ ಇಲ್ಲ
ಇರಾನ್‌ನಲ್ಲಿ ಖಮೇನಿ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರ