ಕ್ಷಯಮುಕ್ತ ಜಿಲ್ಲೆಗಾಗಿ ನೂರುದಿನ ಜಾಗೃತಿ ಅಭಿಯಾನ

KannadaprabhaNewsNetwork |  
Published : Dec 09, 2024, 12:49 AM IST
೮ಕೆಎಲ್‌ಆರ್-೨ಕೋಲಾರದ ಡಿಹೆಚ್‌ಓ ಇಲಾಖೆಯ ಸಭಾಂಗಣದಲ್ಲಿ ’ಆರೋಗ್ಯದ ಬಗ್ಗೆ ಇರಲಿ ಗಮನ- ಟಿಬಿ ಮುಕ್ತ ಭಾರತ ಅಭಿಯಾನಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್. ಹೊಸಮನಿ ಚಾಲನೆ ನೀಡಿದರು. | Kannada Prabha

ಸಾರಾಂಶ

’ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎರಡು ವರ್ಷದಿಂದಲೂ ಸತತ ಪ್ರಯತ್ನ ಮಾಡಲಾಗುತ್ತಿದೆ. ಆದರೂ ರೋಗಿಗಳು ಕಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು, ಸಿಬ್ಬಂದಿ ಮುಂದಿನ ನೂರು ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೋಲಾರಕ್ಷಯರೋಗ (ಟಿಬಿ) ಮುಕ್ತ ಕೋಲಾರ ಜಿಲ್ಲೆಗಾಗಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ "ನೂರು ದಿನಗಳ ಜಾಗೃತಿ ಅಭಿಯಾನ "ಕ್ಕೆ ಚಾಲನೆ ನೀಡಲಾಯಿತು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆದ ’ಆರೋಗ್ಯದ ಬಗ್ಗೆ ಇರಲಿ ಗಮನ- ಟಿಬಿ ಮುಕ್ತ ಭಾರತ ಅಭಿಯಾನ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಟಿಬಿಯ ಪರಿಣಾಮ, ತಡೆಗಟ್ಟುವುದು, ಲಭ್ಯವಿರುವ ಚಿಕಿತ್ಸೆ ತಿಳಿಸಿಕೊಡಲಾಯಿತು. ಮುಂದಿನ ೧೦೦ ದಿನಗಳಲ್ಲಿ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುವ ಶಪಥವನ್ನೂ ಮಾಡಲಾಯಿತು.100 ದಿನಗಳ ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್. ಹೊಸಮನಿ ಮಾತನಾಡಿ, ’ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎರಡು ವರ್ಷದಿಂದಲೂ ಸತತ ಪ್ರಯತ್ನ ಮಾಡುತ್ತಿದ್ದೇವೆ. ಆದರೂ ರೋಗಿಗಳು ಕಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಮುಂದಿನ ನೂರು ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.’ತಪಾಸಣೆಗೆ ಬೇಕಾದ ಸಾಧನಗಳ ಸಂಖ್ಯೆಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲಾಗಿದೆ. ಇದನ್ನು ಬಳಸಿಕೊಂಡು ತ್ವರಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಬೇಕು. ರೋಗಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಗ್ರಾಪಂ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ ತಪಾಸಣೆ ನಡೆಸಬೇಕು. ಸರ್ಕಾರ ನೀಡುವ ಸೌಲಭ್ಯಗಳು ಫಲಾನುಭವಿಗಳಿಗೆ ಸಂಪೂರ್ಣವಾಗಿ ತಲುಪಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.

ಕ್ಷಯ ಶೂನ್ಯಕ್ಕೆ ತರಬೇಕು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ. ಶ್ರೀನಿವಾಸ್ ಮಾತನಾಡಿ, ’೨೦೦೫-೦೬ರಿಂದ ಒಂದು ಲಕ್ಷಕ್ಕೆ ೨೦೪ ಕ್ಷಯ ರೋಗದ ಪ್ರಕರಣ ಪತ್ತೆ ಹಚ್ಚುತ್ತಿದ್ದೆವು. ಈಗ ಅಂತಹ ರೋಗಿಗಳ ಪ್ರಮಾಣವನ್ನು ೫೦ಕ್ಕಿಂತ ಕಡಿಮೆಗೆ ತರಬೇಕು, ಶೂನ್ಯಕ್ಕೆ ತಂದು ದೇಶವನ್ನು ಟಿಬಿ ಮುಕ್ತ ಮಾಡಬೇಕೆಂಬ ಗುರಿ ಹೊಂದಲಾಗಿದೆ ಎಂದು ಹೇಳಿದರು.ಸೌಲಭ್ಯ ಕಲ್ಪಿಸಬೇಕು

’ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ೧೨೦೨ ಪ್ರಕರಣ ಪತ್ತೆ ಹಚ್ಚಬೇಕು ಎಂದು ಗುರಿ ನೀಡಲಾಗಿತ್ತು. ಉಳಿದದ್ದನ್ನು ಈ ೧೦೦ ದಿನಗಳಲ್ಲಿ ಮಾಡಬೇಕು. ಎಲ್ಲ ಗ್ರಾಮಗಳಿಗೂ ಕಡ್ಡಾಯವಾಗಿ ಭೇಟಿ ನೀಡಬೇಕು. ರೋಗಿಗಳನ್ನು ಪತ್ತೆ ಹಚ್ಚಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಬೇಕು’ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ನಾರಾಯಣಸ್ವಾಮಿ, ಜಿಲ್ಲಾ ಶಸ್ತ್ರಚಿಕ್ಸಿತೆ ವೈದ್ಯರಾದ ಮಮತ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಣಿ, ಎನ್.ಟಿ.ಇ.ಪಿ.ಬಿ ಸಿಬ್ಬಂದಿ ಅಮರೇಶ್, ಮದುಕೇಶ್, ಮಹೇಶ್, ವಿನಯಾ ಇದ್ದರು.

PREV

Recommended Stories

ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ
12.69 ಲಕ್ಷ ಶಂಕಾಸ್ಪದ ಬಿಪಿಎಲ್‌ ಚೀಟಿ ರಾಜ್ಯದಲ್ಲಿ ಪತ್ತೆ: ಮುನಿಯಪ್ಪ