ಸದೃಢ ದೇಹದಲ್ಲಿ ಸದೃಢ ಮನಸ್ಸು

KannadaprabhaNewsNetwork |  
Published : Feb 11, 2024, 01:52 AM IST
ಪೋಟೋ 09 ಜಿಕೆಕೆ-1ಗೋಕಾಕ: ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು.  | Kannada Prabha

ಸಾರಾಂಶ

ಯೋಗ, ಜ್ಞಾನ ಪ್ರಾಣಾಯಾಮಗಳನ್ನು ತಮ್ಮ ದಿನಚರಿಗಳಲ್ಲಿ ಅಳವಡಿಸಿಕೊಂಡು ದೇಹ ಶಕ್ತಿ ವೃದ್ದಿಸಿಕೊಳ್ಳುವಂತೆ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಬೇಕು ಎಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರ ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟಿಸಿ ಮಾತನಾಡಿದ ಅವರು, ಯೋಗ, ಜ್ಞಾನ ಪ್ರಾಣಾಯಾಮಗಳನ್ನು ತಮ್ಮ ದಿನಚರಿಗಳಲ್ಲಿ ಅಳವಡಿಸಿಕೊಂಡು ದೇಹ ಶಕ್ತಿ ವೃದ್ದಿಸಿಕೊಳ್ಳುವಂತೆ ಕರೆ ನೀಡಿದರು.

ಭಾವನೆ ಶುದ್ಧವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಶ್ರದ್ಧೆ, ಲವಲವಿಕೆಯಿಂದ ನಿರಂತರ ಅಧ್ಯಯನಶೀಲರಾಗಿ ತಮ್ಮ ಜ್ಞಾನಮಟ್ಟ ಹೆಚ್ಚಿಸಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಿ. ಇಂದು ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ. ಈ ಶಿಕ್ಷಣ ಪಡೆದವರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೌಲಭ್ಯಗಳ ಹಾಗೂ ಅವಕಾಶಗಳ ಸದುಪಯೋಗದಿಂದ ಉತ್ತಮ ವಕೀಲರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು. ಶಿಕ್ಷಣವೇ ಶಕ್ತಿ ಎಂದು ನಂಬಿ ಜಾರಕಿಹೊಳಿ ಕುಟುಂಬದವರು ಪ್ರಾರಂಭಿಸಿದ ಈ ಮಹಾವಿದ್ಯಾಲಯದಲ್ಲಿ ಕಲಿತವರು ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳ ಉನ್ನತ ಕನಸುಗಳನ್ನು ನನಸಾಗಿಸಿ ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡಲು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ಮಾದರಿಯಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಂಗದಲ್ಲಿ ಸೇವೆ ಸಲ್ಲಿಸುವ ನನ್ನ ಕನಸು ಈ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸಲ್ಲಿಸಿದ ಸೇವೆ ಅನುಭವದಿಂದ ನನಸಾಗಿದೆ. ನೀವು ಈ ಸಂಸ್ಥೆಯ ಸಹಕಾರದಿಂದ ಉನ್ನತ ವ್ಯಕ್ತಿಗಳಾಗಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ವಹಿಸಿದ್ದರು. ಆಡಳಿತಾಧಿಕಾರಿ ಬಿ.ಕೆ.ಕುಲಕರ್ಣಿ, ಪ್ರಾಚಾರ್ಯ ಜಿ.ಆರ್. ನಿಡೋಣಿ ವೇದಿಕೆಯಲ್ಲಿ ಇದ್ದರು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ