ಇಂದ್ರಪ್ರಸ್ಥ ಪದವಿ ಪೂರ್ವಕಾಲೇಜಿನ ಅನಘಾ ಕೆ. ರಾಜ್ಯಕ್ಕೆ ದ್ವಿತೀಯ ಸ್ಥಾನಿ

KannadaprabhaNewsNetwork |  
Published : Apr 11, 2026, 12:15 AM IST
ದ್ವಿತೀಯ ಪಿಯುಸಿ ಫಲಿತಾಂಶಇAದ್ರಪ್ರಸ್ಥ ಪದವಿ ಪೂರ್ವಕಾಲೇಜು ಅನಘಾ ಕೆ ರಾಜ್ಯಕ್ಕೆ ದ್ವಿತೀಯ ಸ್ಥಾನಿ   | Kannada Prabha

ಸಾರಾಂಶ

ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವಕಾಲೇಜಿನ ಅನಘಾ ಕೆ ೬೦೦ ರಲ್ಲಿ ೫೯೭ ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.

ಉಪ್ಪಿನಂಗಡಿ: ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವಕಾಲೇಜಿನ ಅನಘಾ ಕೆ ೬೦೦ ರಲ್ಲಿ ೫೯೭ ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.

ಅನಘಾ ಕೆ ಕೊಕ್ಕಡದ ಹರಿಪ್ರಸಾದ್ ಕೆದಿಲಾಯ ಮತ್ತು ಶ್ವೇತಾ ಹೆಚ್ ಕೆ ದಂಪತಿ ಪುತ್ರಿಯಾಗಿದ್ದು, ಪ್ರೌಢ ಶಿಕ್ಷಣವನ್ನು ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿದ್ದು, ಪಿಯುಸಿ ಶಿಕ್ಷಣವನ್ನು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಪಡೆದಿರುತ್ತಾರೆ.

ಎಂಜಿನಿಯರ್ ಆಗುವ ಕನಸಿದೆ: ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ. ೯೫ ಶೇಕಡಾ ಕ್ಕಿಂತ ಹೆಚ್ಚು ಅಂಕ ಗಳಿಸುವ ನಿರೀಕ್ಷೆ ಇತ್ತು. ಕಾಲೇಜಿನಲ್ಲಿ ಉತ್ತಮ ರೀತಿಯಲ್ಲಿ ಪಾಠ ಪ್ರವಚನ ನಡೆಸಿ ಕಲಿಕೆಗೆ ಉತ್ತಮ ಪ್ರೋತ್ಸಾಹ ನೀಡಿದ್ದರು. ಮನೆಯಲ್ಲಿ ಹೆತ್ತವರ ಸಹಕಾರ ಅನುದಿನವೂ ನನಗೆ ಲಭಿಸಿತ್ತು. ಹೆತ್ತವರ ಹಾಗೂ ಇಂದ್ರಪ್ರಸ್ಥ ಕಾಲೇಜಿನ ಪ್ರೋತ್ಸಾಹದಿಂದಾಗಿ ನಾನಿಂದು ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಉತ್ತಮ ಫಲಿತಾಂಶ ಪಡೆಯುವಂತಾಗಿದೆ ಎಂದು ಅನಘಾ ಸಂತಸ ವ್ಯಕ್ತಪಡಿಸಿದ್ದಾರೆ.

ಶೇ ೧೦೦ ಫಲಿತಾಂಶ ದಾಖಲಿಸಿದ ಇಂದ್ರಪ್ರಸ್ಥ ಪಿಯು ಕಾಲೇಜು: ಉಪ್ಪಿನಂಗಡಿಯ ಇಂದ್ರಪ್ರಸ್ಥ ಕಾಲೇಜಿನಲ್ಲಿ ಪರೀಕ್ಷೆ ಬರೆದ ೧೦೧ ವಿದ್ಯಾರ್ಥಿಗಳಲ್ಲಿ ೬೬ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೩೫ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ತನ್ಮೂಲಕ ಶೇ ೧೦೦ ರ ನಿರಂತರ ಫಲಿತಾಂಶ ದಾಖಲಿಸಿಕೊಂಡಿದೆ. ಕಾಲೇಜಿನ ಅನಘ ಕೆ ೫೯೭ ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಪಿ ವಿ ವಿದಿಶಾ ೫೮೯ ಅಂಕ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕೆ ಪೃಥ್ವಿ ಪ್ರಭು ೫೮೭ ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ
ತಾಯಿಯ ಅಗಲಿಕೆ ನೋವಿನಲ್ಲೂ ಪರೀಕ್ಷೆ ಎದುರಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ದಿಶಾ