ರಾಮದುರ್ಗ ಕ್ರಾಸ್ದಿಂದ ಬನಶಂಕರಿ ದೇವಸ್ಥಾನದವರೆಗೆ ₹280 ಲಕ್ಷ ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಬಾದಾಮಿ
ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿಗಳ ನಿರ್ವಹಣೆಯ 2023-24ನೇ ಸಾಲಿನ ಲೆಕ್ಕ ಶೀರ್ಷಿಕೆಯಡಿ ಪಟ್ಟಣದ ರಾಮದುರ್ಗ ಕ್ರಾಸ್ದಿಂದ ಬನಶಂಕರಿ ದೇವಸ್ಥಾನದವರೆಗೆ ₹280 ಲಕ್ಷ ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಐತಿಹಾಸಿಕ ಪ್ರಸಿದ್ಧ ಬಾದಾಮಿ-ಬನಶಂಕರಿದೇವಿ ಜಾತ್ರೆಯು ಜ.25 ರಂದು ನಡೆಯಲಿದ್ದು, ರಸ್ತೆ ಕಾಮಗಾರಿಯಿಂದ ಬರುವ ಲಕ್ಷಾಂತರ ಜನ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದ ಅವರು ಕಾಮಗಾರಿ ಗುಣಮಟ್ಟದ್ದಾಗಿರಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮಂಜುನಾಥ ಹೊಸಮನಿ, ರಾಜಮಹ್ಮದ ಬಾಗವಾನ, ಪಾಂಡು ಕಟ್ಟೀಮನಿ, ಶಂಕರ ಕನಕಗಿರಿ, ರಾಮವ್ವ ಮಾದರ, ಮುಖಂಡರಾದ ಅಶೋಕ ಕೋಟನಕರ, ಕೋನಪ್ಪ ಕಾಟನ್ನವರ, ಎಂ.ಎ.ಖಲೀಫ, ಬಸವರಾಜ ಡೊಳ್ಳಿನ ಎಇಇ ಎಸ್.ಜಿ.ಮೇಟಿ, ಸೇರಿದಂತೆ ಮುಖಂಡರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.