7ರಂದು ಭೀಮಾ ಕೋರೆಗಾಂವ ೨೦೬ನೇ ವಿಜಯೋತ್ಸವ

KannadaprabhaNewsNetwork |  
Published : Jan 05, 2024, 01:45 AM IST
ದದದ | Kannada Prabha

ಸಾರಾಂಶ

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ವಹಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಅವರು ಸಮಾರಂಭ ಉದ್ಘಾಟಿಸುವರು.

ಕನ್ನಡಪ್ರಭ ವಾರ್ತೆ ಬೀಳಗಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ತಾಲೂಕು ಶಾಖೆ ಬೀಳಗಿ ಇವರ ನೇತೃತ್ವದಲ್ಲಿ ಭೀಮಾ ಕೋರೆಗಾಂವ ೨೦೬ನೇ ವಿಜಯೋತ್ಸವ ಹಾಗೂ ಸಾವಿತ್ರಿಭಾಯಿ ಫುಲೆ ಅವರ ೧೯೩ನೇ ಜಯಂತಿ ನಿಮಿತ್ತ ಇಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಜ.೭ರಂದು ಸಂಜೆ ೪.೩೦ ಗಂಟೆಗೆ ವಿಚಾರ ಸಂಕಿರಣ ಹಾಗೂ ಬೃಹತ್‌ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಬಸವರಾಜ ಹಳ್ಳದಮನಿ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ವಹಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಅವರು ಸಮಾರಂಭ ಉದ್ಘಾಟಿಸುವರು. ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆಯನ್ನು ವಸತಿ ಸಚಿವ ಜಮೀರ ಅಹ್ಮದಖಾನ್ ನೆರವೇರಿಸುವರು. ಭಾವಚಿತ್ರಗಳಿಗೆ ಪುಷ್ಪನಮನವನ್ನು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ನೆರವೇರಿಸುವರು. ಶಾಸಕ ಜೆ ಟಿ ಪಾಟೀಲ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಸ್ ಆರ್ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ, ಬಿಡಿಸಿಸಿ ಬ್ಯಾಂಕ್‌ ಬಾಗಲಕೋಟೆ ಅಧ್ಯಕ್ಷ ಅಜಯಕುಮಾರ ಸರನಾಯಕ, ಬಸವಪ್ರಭು ಸರನಾಡಗೌಡರ, ವೀಣಾ ಕಾಶಪ್ಪನವರ, ರಕ್ಷಿತಾ ಈಟಿ, ಹಣಮಂತ ಕಾಖಂಡಕಿ, ಶ್ರೀಶೈಲ ಸೂಳಿಕೇರಿ, ಕಸ್ತೂರಿ ಲಿಂಗಣ್ಣವರ, ಪಪಂ ಸದಸ್ಯರಾದ ರುಕ್ಮಿಣಿ ಗಚ್ಚಿನಮನಿ, ಜಿಪಂ ಮಾಜಿ ಅಧ್ಯಕ್ಷ ಯಮನಪ್ಪ ರೋಳ್ಳಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದ ಅವರು ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅವರು ವಿಶೇಷ ಉಪನ್ಯಾಸ ನೀಡುವರು.೭ರಂದು ಸಂಜೆ ಇಲ್ಲಿನ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಟಿಪ್ಪು ವೃತ್ತ ಗಾಂಧಿ ವೃತ್ತದಿಂದ ಕದಂಗಲ್ಲ ಹಣಮಂತರಾಯ ರಂಗಮಂದಿರದವರಿಗೆ ಭಾವಚಿತ್ರ ಮೆರವಣಿಗೆ ಮತ್ತು ಬೃಹತ್‌ ಪಂಜಿನ ಮೆರವಣಿಗೆ ಜರುಗಲಿದೆ. ಎಲ್ಲ ಪ್ರಗತಿಪರ ಚಿಂತಕರು,ಯುವಕರು,ಎಲ್ಲ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಾರುತಿ ಚಿಕ್ಕಾಲಗುಂಡಿ, ಜಿಲ್ಲಾ ಅಲ್ಪಸಂಖ್ಯಾತರ ಸಂಚಾಲಕ ಕಾಶಿಂಅಲಿ ಗೋಠೆ, ಚಿನ್ನಪ್ಪ ಬಂಡಿವಡ್ಡರ, ಸಿದ್ದು ಹಿರೇಮನಿ, ಶಿವನಿಂಗ ಕಾತರಕಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

70 ಟಿಎಂಸಿ ನೀರಿಗಾಗಿ ಸುಪ್ರೀಂಗೆ ರಿಟ್‌ : ಕಾವೇರಿ ನದಿ ರಕ್ಷಣಾ ಸಮಿತಿ
ತೀರ್ಥಹಳ್ಳಿ ಟ್ರಯಲ್‌ ಬ್ಲಾಸ್ಟ್‌ ಕೇಸ್‌ : 3ನೇ ಅಪರಾಧಿಗೆ 6 ವರ್ಷ ಜೈಲು