.ಬಿಜೆಪಿಯಿಂದ ದೇಶದ ಚಿತ್ರಣವೇ ಬದಲು

KannadaprabhaNewsNetwork |  
Published : Apr 20, 2024, 01:07 AM IST
ಬಿಜೆಪಿಗೆ ಸೇರ್ಪಡೆಗೊಂಡ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ ಎನ್‌ಸಿಪಿ ಕಾರ್ಯಕರ್ತರನ್ನು  ಶಾಸಕಿ ಶಶಿಕಲಾ ಜೊಲ್ಲೆಯವರು ಪಕ್ಷದ ಶಾಲು ಹೊದಿಸಿ ಬಿಜೆಪಿಗೆ ಬರಮಾಡಿಕೊಂಡರು.ರಾಜೇಂದ್ರ ಲಾಡ, ಪ್ರವೀಣ ಲಾಡ,ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ ಇದ್ದರು. | Kannada Prabha

ಸಾರಾಂಶ

ಚಿಕ್ಕೋಡಿ: ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದರು.

ಕನ್ನಡಪ್ರಭವಾರ್ತೆ ಚಿಕ್ಕೋಡಿ

ಕಳೆದ 10 ವರ್ಷಗಳಲ್ಲಿ ಬಿಜೆಪಿಯಿಂದ ಭಾರತದ ಚಿತ್ರಣವೇ ಬದಲಾಗಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಎನ್‌ಸಿಪಿ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದ ನಿಪ್ಪಾಣಿ ತಾಲೂಕಿನ ಶೇಂಡೂರ ಗ್ರಾಮದ 25 ಜನ ಎನ್‌ಸಿಪಿ ಕಾರ್ಯಕರ್ತರನ್ನು ಭೀವಶಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡು ಮಾತನಾಡಿದ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ಆಡಳಿತ ಅವಧಿಯಲ್ಲಿ ₹ 8,810 ಕೋಟಿಗೂ ಹೆಚ್ಚಿನ ಅಭಿವೃಧ್ಧಿ ಕಾಮಗಾರಿಗಳನ್ನು ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಇದು ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೇಕರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪ ತೋಡಕರ, ಸಂದೀಪ ದೇಸಾಯಿ ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‌ಸಿಪಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!