ಗದುಗಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಕ್ತದ ಸಹಿ ಅಭಿಯಾನ

KannadaprabhaNewsNetwork |  
Published : Aug 19, 2026, 02:15 AM IST
ಗದುಗಿನ 20ನೇ ವಾರ್ಡ್‌ನಲ್ಲಿ ಮೋಹನ್ ವರವಿ ಅವರ ನೇತೃತ್ವದಲ್ಲಿ ರಕ್ತ ಸಹಿ ಅಭಿಯಾನ ನಡೆಯಿತು. | Kannada Prabha

ಸಾರಾಂಶ

20ನೇ ವಾರ್ಡ್‌ನ ಯುವಕರು ಸ್ವಯಂಪ್ರೇರಿತರಾಗಿ ರಕ್ತದ ಸಹಿ ಮಾಡುವ ಮೂಲಕ ತಮ್ಮ ಧ್ವನಿಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಗದಗ: ನಗರದ ಸಮಗ್ರ ಅಭಿವೃದ್ಧಿ, ಶಾಶ್ವತ ಕುಡಿಯುವ ನೀರಿನ ಪರಿಹಾರ, ಯುವಕರಿಗೆ ಉದ್ಯೋಗಾವಕಾಶ ಹಾಗೂ ರೈತರ ಹಿತದೃಷ್ಟಿಯಿಂದ ಜಿಲ್ಲೆಯನ್ನು ಬರಗಾಲ ಘೋಷಿಸಬೇಕೆಂದು ಒತ್ತಾಯಿಸಿ ನಗರದ 20ನೇ ವಾರ್ಡ್‌ನಲ್ಲಿ ಮೋಹನ್ ವರವಿ ಅವರ ನೇತೃತ್ವದಲ್ಲಿ ರಕ್ತ ಸಹಿ ಅಭಿಯಾನ ನಡೆಯಿತು.

20ನೇ ವಾರ್ಡ್‌ನ ಯುವಕರು ಸ್ವಯಂಪ್ರೇರಿತರಾಗಿ ರಕ್ತದ ಸಹಿ ಮಾಡುವ ಮೂಲಕ ತಮ್ಮ ಧ್ವನಿಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಈ ರಕ್ತ ಸಹಿ ಅಭಿಯಾನ ದಿನದಿಂದ ದಿನಕ್ಕೆ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಸಂತಸದ ಸಂಗತಿ. ಇದು ಕೇವಲ ಸಹಿ ಅಲ್ಲ ಗದಗದ ಅಭಿವೃದ್ಧಿಗಾಗಿ ಯುವಜನರ ಆಶಯ, ಸಂಕಲ್ಪ ಮತ್ತು ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಅಭಿಯಾನಕಾರರು ತಿಳಿಸಿದರು.

ಈ ವೇಳೆ ಪ್ರವೀಣ್ ಕರಬಿಷ್ಟಿ, ಮಂಜು ವರವಿ, ಮಲ್ಲು ಜಂತ್ಲಿ, ಮಂಜುನಾಥ ಜುಟ್ಲರ, ಪರಶುರಾಮ ಗೊಂದಿ, ಅಮಸಿದ್ದ ಗೌಡರ, ಅನಿಲ ಬಳ್ಳಾರಿ, ಮನೋಜ ಕಿರಟಗೇರಿ, ಲಕ್ಷ್ಮಣ ಮುರುಗೋಡ, ಪ್ರಶಾಂತ ವರವಿ, ಬಸವರಾಜ ಕಮತರ, ನಿಖಿಲ ಅಣ್ಣಿಗೇರಿ, ಪ್ರಕಾಶ ಬರಾಡ, ಸಮೀರ್ ಪಿತ್ತೂರು, ಕಿರಣ ಹುನಗುಂಡಿ, ಕುನಲ ಪವಾರ, ಸಚಿನ ಕಾಂಬಳೆ, ಲೋಕೇಶ ಹೂವಿನಹಡಗಲಿ, ಪ್ರಜ್ವಲ ಕರಿ, ಸಂತೋಷ ಕುರಿ, ನೂತನ ಮುರುಗೋಡ, ಶಿವು ಮುಳುಗುಂದ, ಸೋಹಿಲ ಮುಳಗುಂದ, ಆರ್ಯನ ಬಾದಾಮಿ, ಉಮೇಶ್ ರೆಡ್ಡಿ ಹಳ್ಯಳ, ತನ್ಮಯ ದೊಡ್ಡಮನಿ, ಮದನಸಿಂಗ್ ರಜಪೂತ ಸೇರಿದಂತೆ ಯುವಕರು ಇದ್ದರು.ತಿಂಗಳ ಬಳಿಕ ಗದಗದಲ್ಲಿ ಮಳೆ

ಗದಗ: ಗದಗ- ಬೆಟಗೇರಿ ಅವಳಿ ನಗರದಲ್ಲಿ ತಿಂಗಳ ಬಳಿಕ ಮಳೆ ಪ್ರತ್ಯಕ್ಷವಾಗಿದ್ದು, ಮಂಗಳವಾರ ಅವಳಿ ನಗರದಲ್ಲಿ 20 ನಿಮಿಷಕ್ಕೂ ಹೆಚ್ಚು ಕಾಲ ರಭಸದ ಮಳೆ ಸುರಿಯಿತು.ದಿಢೀರ್ ಸುರಿದ ಮಳೆಯಿಂದ ನಗರದ ಹಲವು ರಸ್ತೆಗಳು ತೇವಗೊಂಡಿದ್ದು, ವಾತಾವರಣ ತಂಪಾಗಿದೆ. ದೀರ್ಘ ಕಾಲದಿಂದ ಮಳೆಯ ನಿರೀಕ್ಷೆಯಲ್ಲಿದ್ದ ರೈತಾಪಿ ವರ್ಗದಲ್ಲಿ ಈ ಮಳೆ ಹೊಸ ಭರವಸೆ ಮೂಡಿಸಿದೆ. ಬಿತ್ತನೆ ಮಾಡಿದ ಬೆಳೆಗಳಿಗೆ ಮಳೆಯ ಅಗತ್ಯವಿದ್ದ ಸಂದರ್ಭದಲ್ಲಿ ಸುರಿದಿರುವ ಅಲ್ಪ ಮಳೆ ಕೂಡಾ ರೈತರಲ್ಲಿ ಸಂತಸ ಮೂಡಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು, ಮಕ್ಕಳಿಂದ ಹೊಳೆ ಗಂಗಾ ಪೂಜೆ
ಕೂಲಿಕಾರರಿಗೆ ಸ್ಕೀಂನ ಲಾಭ ಪಡೆಯಲಿ: ಪಾಟೀಲ್