ಕನ್ನಡಪ್ರಭ ವಾರ್ತೆ ಪಾಂಡವಪುರ
ಮೈಸೂರು ಮೂಲದ ಎನ್ಆರ್ ಕಂಪನಿ ಕೆಲಸಗಾರ ಲಕ್ಷಣ್ ತೂಕದಲ್ಲಿ ಮೋಸಮಾಡಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗ್ರಾಮದ ರೈತ ಹನುಮಂತೇಗೌಡರ ಕೋಳಿ ಫಾರಂನಲ್ಲಿ ಆಟೋಗೆ ಕೋಳಿ ತುಂಬುವಾಗ ಸಿಕ್ಕಿಕೊಂಡಿದ್ದಾನೆ. ರೊಚ್ಚಿಗೆದ್ದ ಕೋಳಿ ಫಾರಂ ಮಾಲೀಕರು ವಂಚಕ ಲಕ್ಷಣ್ನನ್ನು ಹಿಡಿದು ಮರಕ್ಕೆ ಕಟ್ಟಿದ್ದಾರೆ.
ಮೈಸೂರು ಮೂಲದ ಎನ್ಆರ್ ಕಂಪನಿಯಿಂದ ಕೋಳಿ ಮರಿಗಳನ್ನು ಪಡೆದು ಸಾಕುತ್ತಿದ್ದ ಮಾಲೀಕ ಹನುವಂತೇಗೌಡ ಕೋಳಿ ದಪ್ಪ ಆದ ಬಳಿಕ ಮತ್ತೆ ಎನ್ಆರ್ ಕಂಪನಿಯವರಿಗೆ ಕೋಳಿ ನೀಡುತ್ತಿದ್ದರು. ಅದೇ ರೀತಿ ಎನ್ಆರ್ ಕಂಪನಿಯವರು ಸೂಚನೆಯ ಮೇರೆಗೆ ಮೈಸೂರು ಮೂಲಕ ಲಕ್ಷಣ್ ಎಂಬಾತನಿಗೆ ಕಳೆದ ಮೂರು ದಿನಗಳಿಂದ ಕೋಳಿ ತುಂಬಿದ್ದಾರೆ.ಇಷ್ಟು ದಿನ ಒಂದು ಕೋಳಿ 2.200 ಮತ್ತು 2.250 ಕೆಜಿ ತೂಕ ಬರುತ್ತಿದ್ದ ಕೋಳಿಗಳು ಲಕ್ಷಣ್ ತುಂಬುವಾಗ ಕೇವಲ 1.900, 1.950 ಕೆಜಿ ತೂಕ ಬಂದಿದೆ. ಅನುಮಾನಗೊಂಡ ಕೋಳಿ ಫಾರಂ ಮಾಲೀಕ ಹನುಮಂತೇಗೌಡ ಮೂರು ದಿನದ ಬಳಿಕ ಮೂರು ಬಾಕ್ಸ್ ಕೋಳಿ ತುಂಬುವರೆಗೂ ಸುಮ್ಮನಿದ್ದು ಬಳಿಕ ತೂಕ ಮಾಡುವುದನ್ನು ನಿಲ್ಲಿಸಿದ್ದಾನೆ.
ಇದರಿಂದ ಆಕ್ರೋಶಗೊಂಡ ಕೋಳಿಫಾರಂ ಮಾಲೀಕ ಹನುಮಂತೇಗೌಡ ಲಕ್ಷಣ್ನನ್ನು ಹಿಡಿದು ಮರಕ್ಕೆ ಕಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಎನ್ಆರ್ ಕಂಪನಿ ಮೇಲಾಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿ ಸ್ಥಳಕ್ಕೆ ಕರೆಹಿಸಿದ್ದಾರೆ.
ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.