ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಕ್ಷೇತ್ರ ವಿಂಗಡಣೆ ಅವೈಜ್ಞಾನಿಕ
ಅವೈಜ್ಞಾನಿಕವಾಗಿ ಕ್ಷೇತ್ರ ವಿಂಗಡಣೆಯನ್ನು ವಿರೋಧಿ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು. ನಮ್ಮ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಕೋಲಾರ ಜಿಲ್ಲೆ ಉಪ ವಿಭಾಗಾಧಿಕಾರಿಗಳು ಹಾಗೂ ಕೆ.ಎಂ.ಎಫ್. ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಕೋಲಾರ ,ಮಾಲೂರು, ಶ್ರೀನಿವಾಸಪುರ, ಮುಳಬಾಗಿಲು , ಬಂಗಾರಪೇಟೆ, ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಎಲ್ಲಾ ಡೇರಿ ಅಧ್ಯಕ್ಷರು, ಪ್ರತಿನಿಧಿಗಳ ಸಹಯೋಗದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆದು ಅಲ್ಲಿ ಕ್ಷೇತ್ರ ವಿಂಗಡಣೆ ಬಗ್ಗೆ ಒಪ್ಪಿಗೆ ಪಡೆಯುವಂತೆ ಆದೇಶ ನೀಡಿದೆ ಎಂದರು.ನ್ಯಾಯಾಲಯದ ಆದೇಶದಂತೆ ಉಪ ವಿಭಾಗಾಧಿಕಾರಿ ಮೈತ್ರಿ ರವರು ಕೋಲಾರದ ನಂದಿನಿ ಪ್ಯಾಲೇಸ್ ಸಭಾಂಗಣದಲ್ಲಿ ಮಾ.೧೩ ರಂದು ೬ ವಿಧಾನಸಭಾ ಕ್ಷೇತ್ರದ ಎಲ್ಲಾ ಅಧ್ಯಕ್ಷರು ಮತ್ತು ಪ್ರತಿನಿಧಿಗಳ ಹಾಗೂ ಸರ್ವ ಸದಸ್ಯರ ಸಭೆ ಕರೆದಿದ್ದಾರೆ ಎಂದು ಶಾಸಕರು ಹೇಳಿದರು.
ಕ್ಷೇತ್ರ ಉಳಿಸಿಕೊಳ್ಳಲು ಮನವಿಆದ್ದರಿಂದ ಅಂದು ಕ್ಷೇತ್ರದ ಡೇರಿ ಅಧ್ಯಕ್ಷರು ಕ್ಷೇತ್ರ ಉಳಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಕ್ಷೇತ್ರ ವಿಂಗಡಣೆಯನ್ನು ವಿರೋಧಿಸಬೇಕು ಹಾಗೂ ಕ್ಷೇತ್ರದ ಯಾವ ಪ್ರದೇಶವೂ ಬೇರೆ ಕ್ಷೇತ್ರಗಳಿಗೆ ಹೋಗದಂತೆ ಉಳಿಸಿಕೊಳ್ಳಲು ಒತ್ತಾಯಿಸಿದರಲ್ಲದೆ ಕ್ಷೇತ್ರಕ್ಕೆ ಎರಡು ನಿರ್ದೇಶಕರ ಸ್ಥಾನ ನೀಡಲು ಆಗ್ರಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಭೂ ಬ್ಯಾಂಕಿನ ಅಧ್ಯಕ್ಷ ರಘುನಾಥ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾರ್ಥಸಾರಥಿ, ಕೆಯುಡಿಎ ಅಧ್ಯಕ್ಷ ಗೋಪಾಲ ರೆಡ್ಡಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದು ಕುಮಾರ್,ಪಿ. ಎಲ್. ಡಿ ಬ್ಯಾಂಕ್ ನಿರ್ದೇಶಕ ಹೆಚ್. ಕೆ ನಾರಾಯಣಸ್ವಾಮಿ ಇದ್ದರು.