ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಮಂಗಳವಾರ ರಬಕವಿಯ ಬಾಗೋಜಿಮಠದಲ್ಲಿ ನಡೆದ ರಬಕವಿ - ಬನಹಟ್ಟಿ ಹಿರಿಯರ ಸಭೆಯಲ್ಲಿ ಮಾತನಾಡಿದ ಅವರು, ಸಂಯುಕ್ತಾ ಪಾಟೀಲ ಕ್ಷೇತ್ರಕ್ಕೆ ಒಂದರಂತೆ ಪ್ರಣಾಳಿಕೆ ರೂಪಿಸಿದ್ದಾರೆ. ಅದನ್ನು ಕ್ರಿಯಾತ್ಮಕವಾಗಿ ಅಳವಡಿಸುವ ಚಿಂತನೆಯಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಶಿವಾನಂದ ಪಾಟೀಲರ ಕ್ಷೇತ್ರವನ್ನು ಸಮರ್ಥವಾಗಿ ನಿಭಾಯಿಸಿದ ಹಿರಿಮೆ ಹೊಂದಿದ್ದಾರೆ. ಸಂಯುಕ್ತಾ ಪಾಟೀಲರಿಗೆ ಒಮ್ಮೆ ಮತ ನೀಡಿ ಕ್ಷೇತ್ರದ ಸರ್ವಾಂಗೀಣ ಬೆಳವಣಿಗೆಗೆ ಹಿರಿಯರು ಆಶೀರ್ವದಿಸಬೇಕೆಂದು ಕೋರಿದರು.
ಕಳೆದ ಎರಡು ದಶಕಗಳಿಂದ ನಮ್ಮನ್ನು ಪ್ರತಿನಿಧಿಸಿರುವ ಸಂಸದರು ಯಾವುದೇ ಕೆಲಸ ಮಾಡಿಲ್ಲ. ಬಾಗಲಕೋಟೆ - ಕುಡಚಿ ರೈಲು ಯೋಜನೆ ಕುಂಟುತ್ತ ಸಾಗುತ್ತಿದೆ. ಇಚ್ಛಾಶಕ್ತಿ ಕೊರತೆಯ ಸಂಸದರಿಗಿಂತ ಕ್ಷೇತ್ರದ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದು ಹೇಳಿದರು.ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾರ ಪತಿ ಶಿವಕುಮಾರ ತಾಲಂಪಲ್ಲಿ ಮಾತನಾಡಿ, ಕಳೆದರಡು ದಶಕಗಳಿಂದ ತಮ್ಮ ತಂದೆಯ ಕ್ಷೇತ್ರದಲ್ಲಿನ ಅಭೂತಪೂರ್ವ ಅಭಿವೃದ್ಧಿಗೆ ಸಂಯುಕ್ತಾರು ಕಾರಣ. ಈ ಬಾರಿ ಹೊಸ ಮುಖವಾಗಿರುವ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಟೊಂಕ ಕಟ್ಟಿ ಸಜ್ಜಾಗಿರುವ ಸಂಯುಕ್ತಾ ಪಾಟೀಲರಿಗೆ ಮತ ನೀಡಿ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.