ಸಿಪಿವೈ ಗೆಲುವಿನ ಹಿನ್ನೆಲೆ ೧೦೦೧ ಈಡುಗಾಯಿ ಒಡೆದ ಅಭಿಮಾನಿಗಳು

KannadaprabhaNewsNetwork |  
Published : Nov 26, 2024, 12:46 AM IST
ಪೊಟೋ೨೫ಸಿಪಿಟಿ೩: ತಾಲೂಕಿನ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಿ.ಪಿ.ಯೋಗೇಶ್ವರ್ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು. | Kannada Prabha

ಸಾರಾಂಶ

ಉಪಚುನಾವಣೆಗೂ ಮುನ್ನ ಸಿ.ಪಿ.ಯೋಗೇಶ್ವರ್ ಗೆಲುವಿಗಾಗಿ ಹರಕೆ ಹೊತ್ತಿದ್ದ ಅವರ ಅಭಿಮಾನಿಗಳು ಸಿಪಿವೈ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡೆಯ ಕಾರ್ತಿಕ ಸೋಮವಾರದ ದಿನ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು.

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು. ಉಪಚುನಾವಣೆಗೂ ಮುನ್ನ ಸಿ.ಪಿ.ಯೋಗೇಶ್ವರ್ ಗೆಲುವಿಗಾಗಿ ಹರಕೆ ಹೊತ್ತಿದ್ದ ಅವರ ಅಭಿಮಾನಿಗಳು ಸಿಪಿವೈ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡೆಯ ಕಾರ್ತಿಕ ಸೋಮವಾರದ ದಿನ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ವಿ.ಬಿ.ಚಂದ್ರು, ಶಿವಕುಮಾರ್, ಜಯಕುಮಾರ್ (ಜೆಕೆ), ಕೋಟೆ ಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ