ಕನ್ನಡಪ್ರಭ ವಾರ್ತೆ ಟೇಕಲ್ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸುಮಾರು ೫೦೦ ಸುಸಜ್ಜಿತ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತಿದ್ದು, ಇದಕ್ಕೆ ೨೫೦೦ ಕೋಟಿ ರೂ.ಗಳ ವಿಶೇಷ ಅನುದಾನದ ಮೀಸಲಿಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.ಮಾಲೂರು ತಾಲೂಕಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ತವರೂರು ಮಾಸ್ತಿಯಲ್ಲಿ ಎಂಟು ಕೋಟಿ ವೆಚ್ಚದಲ್ಲಿ ಓಸಾಟ್ ಸಂಸ್ಥೆ ನವೀಕರಿಸಿರುವ ನೂರನೇ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡವನ್ನು ಅವರು ಉದ್ಘಾಟಿಸಿ ಮಾತನಾಡಿದರು.ದಾನಿಗಳ ಕೊಡುಗೆಗೆ ಶ್ಲಾಘನೆ
ದಾನಿಗಳ ಸಹಕಾರ ಅಗತ್ಯಶಿಕ್ಷಣದೊಂದಿಗೆ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಧ್ಯೇಯವಾಗಿದೆ. ಅದಕ್ಕೆ ಅಜಿತ್ ಪ್ರೇಮ್ಜಿ ಫೌಂಡೇಶನ್ ನೀಡುವ ೧೫೯೧ ಕೋಟಿ ರು.ಗಳ ಕೊಡುಗೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳ ಸಹಕಾರ ಮುಖ್ಯವೆಂದು ತಿಳಿಸಿದರು.ಸಚಿವರಿಂದ ₹5 ಲಕ್ಷ ನೆರವು
ದಾನಿಗಳಾದ ಜನಾರ್ದನ್ ಠಕ್ಕರ್ ಕುಟುಂಬದಿಂದ ಕೆಪಿಎಸ್ ಶಾಲೆ ನವೀಕರಣವಾಗಿದ್ದು, ಇಂದು ಲೋಕಾರ್ಪಣೆಯಾಗಿದೆ ಇದರ ನಿರ್ವಹಣೆಗೆ ಗ್ರಾಮದ ಗ್ರಾಮದ ಹಲವಾರು ದಾನಿಗಳು ತಮ್ಮದೇ ಆದ ಸಹಾಯ ಹಸ್ತ ನೀಡಿದ್ದು ಅದಕ್ಕೆ ನನ್ನ ಸಂಬಳ ಹಣ ೫ ಲಕ್ಷ ರೂ.ಗಳನ್ನು ನೀಡುವುದಾಗಿ ಸಭೆಯಲ್ಲಿ ಘೋಷಿಸಿದರು. ಲಿಂಡಾ, ಜನಾರ್ಧನ್ ಠಕ್ಕರ್ ದಂಪತಿಗಳು ಸೇವೆ ಹಾಗೂ ಅವರ ಟೀಮ್ ವರ್ಕ್ ಅನನ್ಯವಾಗಿದೆ ಎಂದು ತಿಳಿಸಿದರು.ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಮಾಲೂರು ತಾಲೂಕಿನ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಹುಟ್ಟಿದ ಗ್ರಾಮದಲ್ಲಿ ವಿಶೇಷವಾದ ಕೆಪಿಎಸ್ ಶಾಲೆ ನವೀಕರಣಗೊಂಡಿದ್ದು ತಾಲೂಕಿಗೆ ಹೆಮ್ಮೆಯ ಸಂಗತಿ, ಅದಕ್ಕೆ ಮೂಲ ಕಾರಣರಾದ ಲಿಂಡಾ ಜನಾರ್ಧನ್ ಠಕ್ಕರ್ ದಂಪತಿ ಹಾಗೂ ಅವರ ತಂಡಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಎರಡು ವರ್ಷದಿಂದ ಪ್ರತಿಬಾರಿಯೂ ನನ್ನ ಬಳಿ ಬಂದಾಗ ಅವರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದ್ದು, ಅದರಂತೆ ಮಾಸ್ತಿ ಗ್ರಾಪಂ, ಇಲ್ಲಿನ ಸಾರ್ವಜನಿಕರು, ಜನಪ್ರತಿನಿಧಿಗಳು, ಶಾಲಾ ಅಭಿವೃದ್ಧಿ ಸಮಿತಿ, ಅದಕ್ಕೆ ಪೂರಕವಾಗಿ ಸಹಕಾರ ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ಕೆ.ವೈ.ನಂಜೇಗೌಡ, ದಾನಿಗಳಾದ ಲಿಂಡಾ ಜನಾರ್ದನ್ ಠಕ್ಕರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಬಿಇಓ ಎಚ್.ಎಸ್.ಚಂದ್ರಕಾಲರಿಂದ ಪ್ರಾಸ್ತಾವಿಕ ಭಾಷಣ ಮಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ದಿನ್ನಳ್ಳಿ ರಮೇಶ್ ೧೬೫೦ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಶಿಕ್ಷಣ ಸಚಿವರಿಂದ ಮಕ್ಕಳಿಗೆ ವಿತರಿಸಿದರು.