ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮೈಸೂರು ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಮಂಗಳವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಕಂಡಂತಹ ಧೀಮಂತ ನಾಯಕ, ಹಿಂದುಳಿದ ವರ್ಗಗಳ ದೇವರು ಎಂದೇ ಕರೆಯಲಾಗುವ ಡಿ. ದೇವರಾಜ ಅರಸು ಅವರ ಆಡಳಿತ ಸೂರ್ಯ- ಚಂದ್ರ ಇರುವವರಗೂ ರಾಜ್ಯಕ್ಕೆ ಮಾದರಿ. ಅವರ ಆಡಳಿತವನ್ನು ಇಂದಿಗೂ ರಾಜ್ಯ ಸರ್ಕಾರ ನೆನೆದು ನಡೆಯುತ್ತಿದೆ. ನಮ್ಮ ಮೈಸೂರು ಹೆಮ್ಮೆಯಾಗಿರುವ ಡಿ. ದೇವರಾಜ ಅರಸು ಅವರು ತಂದಂತಹ ಸುಧಾರಣೆಗಳನ್ನು ನಾವು ಇಂದು ಆಡಳಿತದಲ್ಲಿ ಅಳವಡಿಸಿಕೊಂಡು ಹೋಗುತ್ತಿದ್ದೇವೆ ಎಂದು ಅವರು ಹೇಳಿದರು.ಅರಸು ಅವರ ಆಡಳಿತ ಅವಧಿಯಲ್ಲಿ ಭೂ ಸುಧಾರಣೆ, ಜೀತ ಪದ್ಧತಿ, ಪರಿಶಿಷ್ಟ ಜಾತಿ/ ಪಂಗಡದವರಿಗೆ ತಂದಂತಹ ಕಾಯ್ದೆಗಳು, ಅಂಗವಿಕಲರಿಗೆ ಮಾಸಿಕ ವೇತನ, ವಿಧವಾ ವೇತನ ಇವುಗಳು ಅವರು ತಂದಂತಹ ಸಾಮಾಜಿಕ ಸುಧಾರಣೆಗಳಾಗಿವೆ. ಆಶ್ರಯ ಯೋಜನೆಯಡಿ ನಿವೇಶನ ಇಲ್ಲದಿರುವವರಿಗೆ ಮನೆ ನೀಡುವ ಯೋಜನೆ ಇವೆಲ್ಲವೂ ಮರೆಯಲಾಗದಂತಹ ಕೊಡುಗೆಗಳು ಎಂದರು.
ಅಭಿವೃದ್ಧಿಯ ಹರಿಕಾರ
ಅರಸುವನ್ನು ಪೂಜಿಸಬೇಕು
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಜಾನಪದ ವಿದ್ವಾಂಸ ಪ್ರೊ.ಹಿ.ಸಿ. ರಾಮಚಂದ್ರೇಗೌಡ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಘವೇಂದ್ರ ಮೊದಲಾದವರು ಇದ್ದರು.
ಕೋಟ್...
- ಡಾ.ಬಿ. ಪುಷ್ಪಾ ಅಮರನಾಥ್, ಉಪಾಧ್ಯಕ್ಷೆ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ
ಶತಮಾನಗಳಿಂದ ಬಂದಂತಹ ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಯನ್ನು ಹೋಗಲಾಡಿಸಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾನತೆಯಿಂದ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಟ್ಟಂತವರು ಡಿ. ದೇವರಾಜ ಅರಸು ಅವರು. ಅಂತಹವರ ಗುಣ, ವ್ಯಕ್ತಿತ್ವ ಪ್ರತಿಯೊಬ್ಬ ಯುವ ಪೀಳಿಗೆಗೂ ಮಾದರಿ.
- ಡಾ.ಡಿ. ತಿಮ್ಮಯ್ಯ, ವಿಧಾನಪರಿಷತ್ತು ಸದಸ್ಯ