ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ. ದಯಾಕರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಹನುಮಂತಪ್ಪ ವೃತ್ತದಿಂದ ಎಂಜಿ ರಸ್ತೆ ಮಾರ್ಗವಾಗಿ ಆಜಾದ್ ಪಾರ್ಕ್ ವರೆಗೆ ಮೌನ ಮೆರವಣಿಗೆ ಹಾಗೂ ಬಹಿರಂಗ ಸಭೆ ನಡೆಯಲಿದ್ದು, ಎಲ್ಲಾ ರೈತರು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳು, ನಾಗರಿಕರು ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.
ದೇಶಾದಲ್ಲಿ ಅಮಾಯಕ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೊಲ್ಕತ್ತಾದಲ್ಲಿ ಅತ್ಯಾಚಾರ, ಕೊಲೆಗೀಡಾದ ವೈದ್ಯಕೀಯ ತರಬೇತಿ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ವಿಶ್ರಾಂತಿಗೆ ತೆರಳಿದ್ದಾಗ ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿದ್ದಾಳೆ. ಕರ್ನಾಟಕದಲ್ಲೂ ಹೆಣ್ಣು ಭ್ರೂಣ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಅಸಹಾಯಕ ಯುವತಿಯರು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚಾಗುತ್ತಿವೆ ಎಂದರು.ಈ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸ್ಥಳೀಯ ಜಿಲ್ಲಾಡಳಿತಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಇಂತಹ ಕೃತ್ಯಗಳು ಮರುಕಳಿಸದಂತೆ ಕಾನೂನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ಸಿ.ಟಿ. ತುಳಸೇಗೌಡ, ರಮೇಶ್, ಎಸ್. ಮನು ಇದ್ದರು.