- ಕೊಳ್ಳೂರು (ಎಂ) ಸೇತುವೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ಶಹಾಪುರ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಈಗಾಲೇ ಒಂದೂವರೆ ಲಕ್ಷ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆಗೆ ಮುಳುಗಡೆ ಭೀತಿ ಶುರುವಾಗಿದೆ. ಬೀದರ್ -ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ 150 ಮಾರ್ಗದಲ್ಲಿ ಬರುವ, ಕಲಬುರಗಿ-ಯಾದಗಿರಿ- ರಾಯಚೂರು ಜಿಲ್ಲೆಗಳ ಸಂಪರ್ಕಿಸುವ ಪ್ರಮುಖ ಸೇತುವೆ ಇದಾಗಿದೆ.ಸೇತುವೆ ಮುಳುಗಡೆಗೆ ಇನ್ನೂ ಎರಡರಿಂದ ಮೂರು ಅಡಿಗಳಷ್ಟು ಮಾತ್ರ ಬಾಕಿ ಉಳಿದಿದೆ. ಅತ್ತ ಮಹಾರಾಷ್ಟ್ರದಲ್ಲಿ ಕ್ಷಣಕ್ಷಣಕ್ಕೂ ವರುಣಾರ್ಭಟ ಜೋರಾಗಿದ್ದು, ಆಲಮಟ್ಟಿ ಜಲಾಶಯದಕ್ಕೆ ನೀರಿ ಹರಿದು ಬರುತ್ತಿದೆ. ಇದಕ್ಕೆ ಸಮಾನಾಂತರ ಜಲಾಶಯವಾದ ಬಸವ ಸಾಗರಕ್ಕೂ ಆಲಮಟ್ಟಿಯಿಂದ ಒಳಹರಿವು ಹೆಚ್ಚಿದ್ದು, ಬಸವ ಸಾಗರ ಜಲಾಶಯದ ಮಟ್ಟ ಕಾಯ್ದುಕೊಂಡು ಕೃಷ್ಣಾ ಯಾವುದೇ ಕ್ಷಣದಲ್ಲಿ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಸೇತುವೆ ಪರಿಶೀಲಿಸಿದ ಡೀಸಿ: ಕೊಳ್ಳೂರು (ಎಂ) ಸೇತುವೆಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಪರಿಶೀಲನೆ ನಡೆಸಿದರು. ಅಲ್ಲದೆ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ನೋಡಿಕೊಳ್ಳಬೇಕು. ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಧಾವಿಸಬೇಕೆಂದು ಮುನ್ನೆಚ್ಚರಿಕೆ ವಹಿಸಲು ತಾಲೂಕು ಆಡಳಿತಕ್ಕೆ ನಿರ್ದೇಶನ ನೀಡಿದರು.ಅಲ್ಲದೆ ಆಯಾ ಗ್ರಾ.ಪಂ ಪಿಡಿಓ, ಕಂದಾಯ ಇಲಾಖೆಯ ಸಿಬ್ಬಂದಿ ನದಿ ಪಾತ್ರದ ಕೊಳ್ಳೂರು (ಎಂ), ಮರಕಲ್, ಗೌಡೂರ, ಟೊಣ್ಣೂರ, ಕೊಂಕಲ್, ಹಯ್ಯಾಳ (ಬಿ) ಭಾಗದ ಯಕ್ಷಿಂತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಉಮಾಕಾಂತ ಹಳ್ಳಿ, ತಾಲೂಕು ಪಂಚಾಯತ್ ಅಧಿಕಾರಿ ಸೋಮಶೇಖರ ಬಿರಾದಾರ, ಪೊಲೀಸ್ ಸಿಬ್ಬಂದಿ ಸೇರಿದಂತೆ ಮುಂತಾದವರಿದ್ದರ.
----ಕೋಟ್-1 -----
---- ಕೋಟ್-----
-ಶಿವರೆಡ್ಡಿ ಪಾಟೀಲ್, ಕೊಳ್ಳೂರು ಗ್ರಾಮದ ರೈತ ಮುಖಂಡ.
ಫೋಟೊ: 24ವೈಡಿಆರ್12
ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದುಕೊಂಡು ಜಿಲ್ಲಾಧಿಕಾರಿ ಡಾ. ಸುಶೀಲಾ.---000---