ಕೋಲಾರದ ಮಾಜಿ ಶಾಸಕ ಹಾಗೂ ಖ್ಯಾತ ವಕೀಲರಾದ ಕೆ.ಆರ್. ಶ್ರೀನಿವಾಸಯ್ಯ (92) ಅವರು ಗುರುವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ಕು ಮಕ್ಕಳು ಇದ್ದಾರೆ. ಅವರ ನಿಧನದಿಂದ ಕೋಲಾರ ಜಿಲ್ಲೆಯ ರಾಜಕೀಯ, ಸಾಮಾಜಿಕ ಹಾಗೂ ಕಾನೂನು ಕ್ಷೇತ್ರದಲ್ಲಿ ದುಃಖದ ಛಾಯೆ ಆವರಿಸಿದೆ.
ಕೋಲಾರ: ಕೋಲಾರದ ಮಾಜಿ ಶಾಸಕ ಹಾಗೂ ಖ್ಯಾತ ವಕೀಲರಾದ ಕೆ.ಆರ್. ಶ್ರೀನಿವಾಸಯ್ಯ (92) ಅವರು ಗುರುವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ನಾಲ್ಕು ಮಕ್ಕಳು ಇದ್ದಾರೆ. ಅವರ ನಿಧನದಿಂದ ಕೋಲಾರ ಜಿಲ್ಲೆಯ ರಾಜಕೀಯ, ಸಾಮಾಜಿಕ ಹಾಗೂ ಕಾನೂನು ಕ್ಷೇತ್ರದಲ್ಲಿ ದುಃಖದ ಛಾಯೆ ಆವರಿಸಿದೆ.
ಕೆ.ಆರ್. ಶ್ರೀನಿವಾಸಯ್ಯ ಅವರು 1983 ಮತ್ತು 1985ರ ವಿಧಾನಸಭಾ ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಲಾರ ಕ್ಷೇತ್ರದಿಂದ ಗೆದ್ದು ಶಾಸಕರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ರಾಜಕೀಯದಲ್ಲಿ ಜನತಾ ಪರಿವಾರದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಅವರು, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೆಗಡೆ ಅವರ ಮೌಲ್ಯಾಧಾರಿತ ರಾಜಕಾರಣದ ತತ್ವಗಳನ್ನು ಅನುಸರಿಸುತ್ತಾ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಸರಳತೆಯನ್ನು ಉಳಿಸಿಕೊಂಡಿದ್ದರು. ರಾಜಕೀಯ ಜೀವನದ ಜೊತೆಗೆ ಅವರು ಯಶಸ್ವಿ ವಕೀಲರಾಗಿಯೂ ಹೆಸರುವಾಸಿಯಾಗಿದ್ದರು. ನ್ಯಾಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳಲ್ಲಿ ಅವರ ನಿಲುವು ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು.
ಶ್ರೀನಿವಾಸಯ್ಯ ಅವರು ಸರಳ ಸಜ್ಜನಿಕೆ, ವಿನಯಶೀಲತೆ ಹಾಗೂ ಮೌಲ್ಯಾಧಾರಿತ ರಾಜಕಾರಣಕ್ಕಾಗಿ ಹೆಸರಾದವರು. ಅಧಿಕಾರ ಮತ್ತು ಹುದ್ದೆಗಳಿಗಿಂತ ಜನಸೇವೆ ಹಾಗೂ ನೈತಿಕ ರಾಜಕೀಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದ ಅವರು, ರಾಜಕೀಯ ಎದುರಾಳಿಗಳಿಂದಲೂ ಗೌರವಿಸಲ್ಪಟ್ಟ ನಾಯಕರಾಗಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.